‘ಕಾಂಗ್ರೆಸ್ ಪಕ್ಷ ನೀರಿನ ವಿಚಾರದಲ್ಲಿ ರಾಜಕೀಯ ನಾಟಕ ಆಡುತ್ತಿದ್ದು, ರಾಜ್ಯದ ಜನರಿಗೆ ದ್ರೋಹ ಎಸಗುತ್ತಿದೆ. ನೆಲ, ಜಲದ ವಿಚಾರಗಳಲ್ಲಿ ರಾಜಕೀಯಪ್ರೇರಿತ ಹೋರಾಟ ಖಂಡನೀಯ. ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರ ಯೋಜನೆಯ ಅನುಷ್ಠಾನಕ್ಕೆ ಬದ್ಧವಾಗಿವೆ. ತಮಿಳುನಾಡಿನಲ್ಲಿ ಡಿಎಂಕೆ ಜತೆ ಇರುವ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ಬಂದು ಯಾವುದೋ ಕಾಲವಾಗಿದೆ. ಇಂಥ ದುರವಸ್ಥೆಯಲ್ಲಿರುವ ಪಕ್ಷದ ಅಧ್ಯಕ್ಷರು, ಮೇಕೆದಾಟು ಯೋಜನೆ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ. ಆದರೆ, ನಮಗೆ ಸಂಘರ್ಷದಲ್ಲಿ ನಂಬಿಕೆ ಇಲ್ಲ’ ಎಂದರು.