ಕ್ಯಾಪ್ಟನ್ ಕೃಷ್ಣಾಜಿರಾವ್ ಯಾದವ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾರತದ ಫುಟ್ಬಾಲ್ ತಂಡದ ಮಿಡ್ ಫೀಲ್ಡರ್ ಆಗಿ, ತರಬೇತುದಾರರಾಗಿ, ಕರ್ನಾಟಕ ತಂಡದ ನಾಯಕರಾಗಿ ಫುಟ್ಬಾಲ್ ಕೇತ್ರಕ್ಕೆ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಭಾರತದ ಫುಟ್ಬಾಲ್ ಕ್ರೀಡೆಗೆ ಅವರು ಕೊಡುಗೆ ನೀಡುವ ಮೂಲಕ ಕರ್ನಾಟಕದ ಹೆಸರನ್ನು ವಿಶ್ವ ಮಟ್ಟಕ್ಕೆ ಕೊಂಡೊಯ್ದಿದ್ದರು. ಅವರ ಅಗಲಿಕೆ ರಾಷ್ಟ್ರಕ್ಕೆ ತುಂಬಲಾರದ ನಷ್ಟ’ ಎಂದರು.