<p><strong>ಬೆಂಗಳೂರು</strong>: ವೈಟ್ಫೀಲ್ಡ್, ದೇವನಗೊಂದಿ ರೈಲು ನಿಲ್ದಾಣಗಳ ನಡುವೆ ನಿರ್ವಹಣೆ ಮತ್ತು ಹಳಿ ಜೋಡಣೆ ಕಾಮಗಾರಿ ಹಮ್ಮಿಕೊಳ್ಳಲು ಏಪ್ರಿಲ್ 27ರಿಂದ ಮೇ 3ರವರೆಗೆ ಮೆಮು ರೈಲುಗಳ ಸಂಚಾರವನ್ನು ಭಾಗಶಃ ರದ್ದು ಮಾಡಲಾಗಿದೆ.</p>.<p>ಕೆಎಸ್ಆರ್ ಬೆಂಗಳೂರು-ಮಾರಿಕುಪ್ಪಂ ಮೆಮು ರೈಲು ಬಂಗಾರಪೇಟೆವರೆಗೆ ಮಾತ್ರ ಸಂಚರಿಸಲಿದೆ. ಮಾರಿಕುಪ್ಪಂಗೆ ತೆರಳುವುದಿಲ್ಲ. ಮಾರಿಕುಪ್ಪಂ-ಕೃಷ್ಣರಾಜಪುರ ಮೆಮು ರೈಲು ಮಾರಿಕುಪ್ಪಂನಿಂದ ಹೊರಡುವ ಬದಲು ಬಂಗಾರಪೇಟೆಯಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಆರಂಭಿಸಲಿದೆ. ಮಾರಿಕುಪ್ಪಂ ಮತ್ತು ಬಂಗಾರಪೇಟೆ ನಡುವೆ ಈ ರೈಲಿನ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಸಂಚಾರ ಬದಲಾವಣೆ:</strong> ಚನ್ನಸಂದ್ರ ನಿಲ್ದಾಣದ ಯಾರ್ಡ್ ಬಳಿ ರೈಲ್ವೆ ಹಳಿಗಳ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಕೆಎಸ್ಆರ್ ಬೆಂಗಳೂರು-ನಾಂದೇಡ್ ದೈನಂದಿನ ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಬದಲಾವಣೆ ಉಂಟಾಗಲಿದೆ.</p>.<p>ಏಪ್ರಿಲ್ 24, 25, 28, 30 ಹಾಗೂ ಮೇ 1 ಕೆಎಸ್ಆರ್ ಬೆಂಗಳೂರಿನಿಂದ ನಿಗದಿತ ಸಮಯಕ್ಕಿಂತ 45 ನಿಮಿಷ ತಡವಾಗಿ ಪ್ರಯಾಣ ಆರಂಭಗೊಳ್ಳಲಿದೆ. ಈ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸುವುದರಿಂದ, ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವೈಟ್ಫೀಲ್ಡ್, ದೇವನಗೊಂದಿ ರೈಲು ನಿಲ್ದಾಣಗಳ ನಡುವೆ ನಿರ್ವಹಣೆ ಮತ್ತು ಹಳಿ ಜೋಡಣೆ ಕಾಮಗಾರಿ ಹಮ್ಮಿಕೊಳ್ಳಲು ಏಪ್ರಿಲ್ 27ರಿಂದ ಮೇ 3ರವರೆಗೆ ಮೆಮು ರೈಲುಗಳ ಸಂಚಾರವನ್ನು ಭಾಗಶಃ ರದ್ದು ಮಾಡಲಾಗಿದೆ.</p>.<p>ಕೆಎಸ್ಆರ್ ಬೆಂಗಳೂರು-ಮಾರಿಕುಪ್ಪಂ ಮೆಮು ರೈಲು ಬಂಗಾರಪೇಟೆವರೆಗೆ ಮಾತ್ರ ಸಂಚರಿಸಲಿದೆ. ಮಾರಿಕುಪ್ಪಂಗೆ ತೆರಳುವುದಿಲ್ಲ. ಮಾರಿಕುಪ್ಪಂ-ಕೃಷ್ಣರಾಜಪುರ ಮೆಮು ರೈಲು ಮಾರಿಕುಪ್ಪಂನಿಂದ ಹೊರಡುವ ಬದಲು ಬಂಗಾರಪೇಟೆಯಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಆರಂಭಿಸಲಿದೆ. ಮಾರಿಕುಪ್ಪಂ ಮತ್ತು ಬಂಗಾರಪೇಟೆ ನಡುವೆ ಈ ರೈಲಿನ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಸಂಚಾರ ಬದಲಾವಣೆ:</strong> ಚನ್ನಸಂದ್ರ ನಿಲ್ದಾಣದ ಯಾರ್ಡ್ ಬಳಿ ರೈಲ್ವೆ ಹಳಿಗಳ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಕೆಎಸ್ಆರ್ ಬೆಂಗಳೂರು-ನಾಂದೇಡ್ ದೈನಂದಿನ ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಬದಲಾವಣೆ ಉಂಟಾಗಲಿದೆ.</p>.<p>ಏಪ್ರಿಲ್ 24, 25, 28, 30 ಹಾಗೂ ಮೇ 1 ಕೆಎಸ್ಆರ್ ಬೆಂಗಳೂರಿನಿಂದ ನಿಗದಿತ ಸಮಯಕ್ಕಿಂತ 45 ನಿಮಿಷ ತಡವಾಗಿ ಪ್ರಯಾಣ ಆರಂಭಗೊಳ್ಳಲಿದೆ. ಈ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸುವುದರಿಂದ, ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>