ಬಿಇಎಲ್ ಲೇಔಟ್ ಬಳಿ ನಿರ್ಮಿಸಲಾಗಿರುವ ಸುಕೂನ್ ಮಾನಸಿಕ ಆರೋಗ್ಯ ಕೇಂದ್ರವನ್ನು ನಗರದಲ್ಲಿ ಬುಧವಾರ ಉದ್ಘಾಟಿಸಿ, ಮಾತನಾಡಿದರು. ‘ಯುವಜನರಲ್ಲಿ ಮಾನಸಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇದಕ್ಕೆ ಕೆಲಸದ ಒತ್ತಡ ಪ್ರಮುಖ ಕಾರಣ. ಒತ್ತಡದ ಜೀವನದಲ್ಲಿ ಕೆಲವರು ಮಾನಸಿಕವಾಗಿ ತಮ್ಮ ಸ್ಥಿಮಿತ ಕಳೆದುಕೊಳ್ಳುವ ಸಾಧ್ಯತೆಯೂ ಇರುತ್ತದೆ. ಖಿನ್ನತೆಯಿಂದ ಜೀವಕ್ಕೆ ಕುತ್ತು ತಂದುಕೊಳ್ಳುವ ಅಪಾಯವೂ ಇದೆ’ ಎಂದು ಕಳವಳ ವ್ಯಕ್ತಪಡಿಸಿದರು.