<p><strong>ಬೆಂಗಳೂರು</strong>: ‘ನಿರಾಶ್ರಿತ ಮಾನಸಿಕ ಅಸ್ವಸ್ಥರ ಸಮಗ್ರ ಚಿಕಿತ್ಸೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ (ಇಸಿಆರ್ಸಿ) ಪ್ರಾರಂಭಿಸಬೇಕು’ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. </p>.<p>ನಿರಾಶ್ರಿತ ಮಾನಸಿಕ ಅಸ್ವಸ್ಥರ ಸಮಗ್ರ ಆರೈಕೆ ಸೇವೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಆಲದಮರ ಫೌಂಡೇಷನ್ ಹಮ್ಮಿಕೊಂಡಿದ್ದ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು.</p>.<p>‘ಹಾಲಿ ವ್ಯವಸ್ಥೆಯಡಿ ನಿರಾಶ್ರಿತ ಮಾನಸಿಕ ಅಸ್ವಸ್ಥರನ್ನು ಗುರುತಿಸಿ, ಆಶ್ರಯ ಸಹಿತ ಚಿಕಿತ್ಸೆ ಒದಗಿಸುವುದು ಕಷ್ಟಸಾಧ್ಯ. ಆದ್ದರಿಂದ ಅವರ ಚಿಕಿತ್ಸೆಗೆ ಅಗತ್ಯ ಸಿಬ್ಬಂದಿಯನ್ನು ಗುರುತಿಸಿ, ತರಬೇತಿ ಒದಗಿಸಬೇಕು. ಈ ಕೆಲಸ ಎಲ್ಲ ಜಿಲ್ಲೆಗಳಲ್ಲೂ ಆಗಬೇಕು. ಮಾನಸಿಕ ಅಸ್ವಸ್ಥರು ಹಲವು ಬಾರಿ ನಂಬಿಕೆ ದ್ರೋಹ, ಕಿರುಕುಳ ಎದುರಿಸಿರುತ್ತಾರೆ. ಆರ್ಥಿಕ, ಲೈಂಗಿಕ ಕಿರುಕುಳಗಳೂ ಅವರ ಮೇಲೆ ನಡೆಯುವ ಸಾಧ್ಯತೆ ಇರುತ್ತದೆ. ಆರೋಗ್ಯ ಕಾರ್ಯಕರ್ತರು, ಮನೋವೈದ್ಯರು ಅವರನ್ನು ಕಾಳಜಿಯಿಂದ ಕಂಡು, ವಿಶ್ವಾಸಕ್ಕೆ ಪಡೆದುಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಆಲದಮರ ಫೌಂಡೇಷನ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಕುಮಾರ್ ಕೆ.ವಿ., ‘ರಾಜ್ಯ ಸರ್ಕಾರದ ಸಹಯೋಗದಲ್ಲಿ ಎಲ್ಲ ಜಿಲ್ಲೆಗಳಲ್ಲಿ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಪ್ರಾರಂಭಕ್ಕೆ ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಸರ್.ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಈ ಕೇಂದ್ರ ಆರಂಭಿಸಲಾಗಿದೆ. ಕೋಲಾರ, ಉಡುಪಿ ಸೇರಿ ಇತರ ಜಿಲ್ಲೆಗಳಲ್ಲಿ ಹಂತ, ಹಂತವಾಗಿ ಅಸ್ವಸ್ಥರನ್ನು ಗುರುತಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಮಾನಸಿಕ ಅಸ್ವಸ್ಥರಿಗೆ ಆಹಾರ, ನೀರು ಒದಗಿಸುವುದು ಮುಖ್ಯ. ಅವರ ಇತರ ಕಾಯಿಲೆಗಳ ಬಗ್ಗೆಯೂ ತಿಳಿದು ಚಿಕಿತ್ಸೆ ನೀಡಬೇಕು. ಅವರು ಚೇತರಿಸಿಕೊಂಡು ಮನೆಗೆ ಸೇರಿದ ಬಳಿಕವೂ ನಿರಂತರ ನಿಗಾ ವಹಿಸಬೇಕಾಗುತ್ತದೆ. ಸ್ವಾವಲಂಬನೆಯ ಬದುಕು ನಡೆಸಲು ನಮ್ಮ ಸಂಸ್ಥೆಯಿಂದ ಅನುಕೂಲ ಮಾಡಿಕೊಡಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಿರಾಶ್ರಿತ ಮಾನಸಿಕ ಅಸ್ವಸ್ಥರ ಸಮಗ್ರ ಚಿಕಿತ್ಸೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ (ಇಸಿಆರ್ಸಿ) ಪ್ರಾರಂಭಿಸಬೇಕು’ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. </p>.<p>ನಿರಾಶ್ರಿತ ಮಾನಸಿಕ ಅಸ್ವಸ್ಥರ ಸಮಗ್ರ ಆರೈಕೆ ಸೇವೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಆಲದಮರ ಫೌಂಡೇಷನ್ ಹಮ್ಮಿಕೊಂಡಿದ್ದ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು.</p>.<p>‘ಹಾಲಿ ವ್ಯವಸ್ಥೆಯಡಿ ನಿರಾಶ್ರಿತ ಮಾನಸಿಕ ಅಸ್ವಸ್ಥರನ್ನು ಗುರುತಿಸಿ, ಆಶ್ರಯ ಸಹಿತ ಚಿಕಿತ್ಸೆ ಒದಗಿಸುವುದು ಕಷ್ಟಸಾಧ್ಯ. ಆದ್ದರಿಂದ ಅವರ ಚಿಕಿತ್ಸೆಗೆ ಅಗತ್ಯ ಸಿಬ್ಬಂದಿಯನ್ನು ಗುರುತಿಸಿ, ತರಬೇತಿ ಒದಗಿಸಬೇಕು. ಈ ಕೆಲಸ ಎಲ್ಲ ಜಿಲ್ಲೆಗಳಲ್ಲೂ ಆಗಬೇಕು. ಮಾನಸಿಕ ಅಸ್ವಸ್ಥರು ಹಲವು ಬಾರಿ ನಂಬಿಕೆ ದ್ರೋಹ, ಕಿರುಕುಳ ಎದುರಿಸಿರುತ್ತಾರೆ. ಆರ್ಥಿಕ, ಲೈಂಗಿಕ ಕಿರುಕುಳಗಳೂ ಅವರ ಮೇಲೆ ನಡೆಯುವ ಸಾಧ್ಯತೆ ಇರುತ್ತದೆ. ಆರೋಗ್ಯ ಕಾರ್ಯಕರ್ತರು, ಮನೋವೈದ್ಯರು ಅವರನ್ನು ಕಾಳಜಿಯಿಂದ ಕಂಡು, ವಿಶ್ವಾಸಕ್ಕೆ ಪಡೆದುಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಆಲದಮರ ಫೌಂಡೇಷನ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಕುಮಾರ್ ಕೆ.ವಿ., ‘ರಾಜ್ಯ ಸರ್ಕಾರದ ಸಹಯೋಗದಲ್ಲಿ ಎಲ್ಲ ಜಿಲ್ಲೆಗಳಲ್ಲಿ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಪ್ರಾರಂಭಕ್ಕೆ ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಸರ್.ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಈ ಕೇಂದ್ರ ಆರಂಭಿಸಲಾಗಿದೆ. ಕೋಲಾರ, ಉಡುಪಿ ಸೇರಿ ಇತರ ಜಿಲ್ಲೆಗಳಲ್ಲಿ ಹಂತ, ಹಂತವಾಗಿ ಅಸ್ವಸ್ಥರನ್ನು ಗುರುತಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಮಾನಸಿಕ ಅಸ್ವಸ್ಥರಿಗೆ ಆಹಾರ, ನೀರು ಒದಗಿಸುವುದು ಮುಖ್ಯ. ಅವರ ಇತರ ಕಾಯಿಲೆಗಳ ಬಗ್ಗೆಯೂ ತಿಳಿದು ಚಿಕಿತ್ಸೆ ನೀಡಬೇಕು. ಅವರು ಚೇತರಿಸಿಕೊಂಡು ಮನೆಗೆ ಸೇರಿದ ಬಳಿಕವೂ ನಿರಂತರ ನಿಗಾ ವಹಿಸಬೇಕಾಗುತ್ತದೆ. ಸ್ವಾವಲಂಬನೆಯ ಬದುಕು ನಡೆಸಲು ನಮ್ಮ ಸಂಸ್ಥೆಯಿಂದ ಅನುಕೂಲ ಮಾಡಿಕೊಡಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>