<p><strong>ಬೆಂಗಳೂರು:</strong> ದರೋಡೆ ಪ್ರಕರಣದ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರೌಡಿಶೀಟರ್ ಪ್ರಸಾದ್ ಅಲಿಯಾಸ್ ಮೆಂಟಲ್ ಪ್ರಸಾದ್ ಕುಟುಂಬದ ವಿರುದ್ಧ ವಿದ್ಯಾರಣ್ಯಪುರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಎರಡು ವರ್ಷಗಳ ಹಿಂದೆ ಪ್ರಕರಣವೊಂದರ ಸಂಬಂಧ ಜೈಲು ಸೇರಿದ್ದ ಪ್ರಸಾದ್, ಜಾಮೀನಿನ ಮೇಲೆ ಅಕ್ಟೋಬರ್ 17ರಂದು ಬಿಡುಗಡೆಯಾಗಿದ್ದ. ಅದೇ ದಿನ ರಾತ್ರಿ ದೊಡ್ಡಬೊಮ್ಮಸಂದ್ರದಲ್ಲಿ ದರೋಡೆ ಪ್ರಕರಣ ವರದಿಯಾಗಿತ್ತು. ಈ ಸಂಬಂಧ ಆ ದಿನ ಠಾಣಾಧಿಕಾರಿಗಳು ಸೇರಿ 10ಕ್ಕೂ ಹೆಚ್ಚು ಮಂದಿ ಆತನ ಮನೆ ಬಳಿ ಹೋಗಿ ವಿಚಾರಣೆಗೆ ಮುಂದಾಗಿದ್ದರು.</p>.<p>ಆಗ ಪ್ರಸಾದ್ ಮತ್ತು ಆತನ ಕುಟುಂಬ ಸದಸ್ಯರು ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ. ಗೇಟ್ ಹಾಕಿ ಮನೆ ಪ್ರವೇಶಿಸದಂತೆ ಅಡ್ಡಪಡಿಸಿ, ಹಲ್ಲೆಗೂ ಮುಂದಾಗಿದ್ದರು ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.</p>.<p>ಪ್ರಸಾದ್ ವಿರುದ್ಧ ವಿದ್ಯಾರಣ್ಯಪುರ, ಗಂಗಮ್ಮನಗುಡಿ, ಜಯನಗರ ಠಾಣೆಗಳಲ್ಲಿ ಕೊಲೆ ಪ್ರಕರಣ ದಾಖಲಾಗಿವೆ. ನಗರದ ಆರು ಠಾಣೆಗಳಲ್ಲಿ ಹಲ್ಲೆ, ದರೋಡೆ ಪ್ರಕರಣಗಳು ಇವೆ. ಈತನ ವಿರುದ್ಧ ವಿದ್ಯಾರಣ್ಯಪುರ ಠಾಣೆಯಲ್ಲಿ ರೌಡಿ ಪಟ್ಟಿ ತೆರೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಮೀಟರ್ ಸೀನಾ ಎಂಬಾತನ ಪ್ರಚೋದನೆಯಿಂದ ಪ್ರಸಾದ್ನನ್ನು ಬಂಧಿಸಲು ಮುಂದಾಗಿದ್ದಾರೆ ಎಂದು ಪೊಲೀಸರ ವಿರುದ್ಧ ಪ್ರಸಾದ್ ಕುಟುಂಬ ಆರೋಪ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದರೋಡೆ ಪ್ರಕರಣದ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರೌಡಿಶೀಟರ್ ಪ್ರಸಾದ್ ಅಲಿಯಾಸ್ ಮೆಂಟಲ್ ಪ್ರಸಾದ್ ಕುಟುಂಬದ ವಿರುದ್ಧ ವಿದ್ಯಾರಣ್ಯಪುರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಎರಡು ವರ್ಷಗಳ ಹಿಂದೆ ಪ್ರಕರಣವೊಂದರ ಸಂಬಂಧ ಜೈಲು ಸೇರಿದ್ದ ಪ್ರಸಾದ್, ಜಾಮೀನಿನ ಮೇಲೆ ಅಕ್ಟೋಬರ್ 17ರಂದು ಬಿಡುಗಡೆಯಾಗಿದ್ದ. ಅದೇ ದಿನ ರಾತ್ರಿ ದೊಡ್ಡಬೊಮ್ಮಸಂದ್ರದಲ್ಲಿ ದರೋಡೆ ಪ್ರಕರಣ ವರದಿಯಾಗಿತ್ತು. ಈ ಸಂಬಂಧ ಆ ದಿನ ಠಾಣಾಧಿಕಾರಿಗಳು ಸೇರಿ 10ಕ್ಕೂ ಹೆಚ್ಚು ಮಂದಿ ಆತನ ಮನೆ ಬಳಿ ಹೋಗಿ ವಿಚಾರಣೆಗೆ ಮುಂದಾಗಿದ್ದರು.</p>.<p>ಆಗ ಪ್ರಸಾದ್ ಮತ್ತು ಆತನ ಕುಟುಂಬ ಸದಸ್ಯರು ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ. ಗೇಟ್ ಹಾಕಿ ಮನೆ ಪ್ರವೇಶಿಸದಂತೆ ಅಡ್ಡಪಡಿಸಿ, ಹಲ್ಲೆಗೂ ಮುಂದಾಗಿದ್ದರು ಎಂದು ಹೇಳಲಾಗಿದೆ. ಈ ಸಂಬಂಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.</p>.<p>ಪ್ರಸಾದ್ ವಿರುದ್ಧ ವಿದ್ಯಾರಣ್ಯಪುರ, ಗಂಗಮ್ಮನಗುಡಿ, ಜಯನಗರ ಠಾಣೆಗಳಲ್ಲಿ ಕೊಲೆ ಪ್ರಕರಣ ದಾಖಲಾಗಿವೆ. ನಗರದ ಆರು ಠಾಣೆಗಳಲ್ಲಿ ಹಲ್ಲೆ, ದರೋಡೆ ಪ್ರಕರಣಗಳು ಇವೆ. ಈತನ ವಿರುದ್ಧ ವಿದ್ಯಾರಣ್ಯಪುರ ಠಾಣೆಯಲ್ಲಿ ರೌಡಿ ಪಟ್ಟಿ ತೆರೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಮೀಟರ್ ಸೀನಾ ಎಂಬಾತನ ಪ್ರಚೋದನೆಯಿಂದ ಪ್ರಸಾದ್ನನ್ನು ಬಂಧಿಸಲು ಮುಂದಾಗಿದ್ದಾರೆ ಎಂದು ಪೊಲೀಸರ ವಿರುದ್ಧ ಪ್ರಸಾದ್ ಕುಟುಂಬ ಆರೋಪ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>