<p><strong>ಬೆಂಗಳೂರು:</strong> ಹೊಸಕೆರೆಹಳ್ಳಿಯ ಕೆರೆಕೋಡಿ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡುತ್ತಿದ್ದ ಯುವಕನನ್ನು ಸಾರ್ವಜನಿಕರೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಗಿರಿನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಆ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ.</p>.<p>‘ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರು ಸಾರ್ವಜನಿಕರ ಮೇಲೆ ಎರಗಿದ್ದ ಆರೋಪಿ, ಮಾರಕಾಸ್ತ್ರಗಳಿಂದ ಹೊಡೆದಿದ್ದ. ಅವರ ರಕ್ಷಣೆಗೆ ಬಂದವರ ಮೇಲೂ ಹಲ್ಲೆಗೆ ಯತ್ನಿಸಿದ್ದ. ಗುಂಪು ಸೇರಿದ್ದ ಸ್ಥಳೀಯರು, ಆತನನ್ನು ಹಿಡಿದು ಥಳಿಸಿದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.</p>.<p>‘ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಬಂದು ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು’ ಎಂದರು.</p>.<p>ಗಿರಿನಗರ ಪೊಲೀಸರು, ‘ಸಾರ್ವಜನಿಕರು ಥಳಿಸಿದ್ದರಿಂದಾಗಿಯುವಕ ಗಾಯಗೊಂಡಿದ್ದಾನೆ. ಆತನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಏನಾಯಿತು ಎಂಬುದರ ಬಗ್ಗೆ ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆ ಪಡೆಯಬೇಕಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೊಸಕೆರೆಹಳ್ಳಿಯ ಕೆರೆಕೋಡಿ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡುತ್ತಿದ್ದ ಯುವಕನನ್ನು ಸಾರ್ವಜನಿಕರೇ ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಗಿರಿನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.</p>.<p>ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಆ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ.</p>.<p>‘ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರು ಸಾರ್ವಜನಿಕರ ಮೇಲೆ ಎರಗಿದ್ದ ಆರೋಪಿ, ಮಾರಕಾಸ್ತ್ರಗಳಿಂದ ಹೊಡೆದಿದ್ದ. ಅವರ ರಕ್ಷಣೆಗೆ ಬಂದವರ ಮೇಲೂ ಹಲ್ಲೆಗೆ ಯತ್ನಿಸಿದ್ದ. ಗುಂಪು ಸೇರಿದ್ದ ಸ್ಥಳೀಯರು, ಆತನನ್ನು ಹಿಡಿದು ಥಳಿಸಿದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.</p>.<p>‘ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಸ್ಥಳಕ್ಕೆ ಬಂದು ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು’ ಎಂದರು.</p>.<p>ಗಿರಿನಗರ ಪೊಲೀಸರು, ‘ಸಾರ್ವಜನಿಕರು ಥಳಿಸಿದ್ದರಿಂದಾಗಿಯುವಕ ಗಾಯಗೊಂಡಿದ್ದಾನೆ. ಆತನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಏನಾಯಿತು ಎಂಬುದರ ಬಗ್ಗೆ ಪ್ರತ್ಯಕ್ಷದರ್ಶಿಗಳಿಂದ ಹೇಳಿಕೆ ಪಡೆಯಬೇಕಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>