<p><strong>ಬೆಂಗಳೂರು</strong>: ‘ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಉದ್ಯೋಗಸ್ಥ ಮಹಿಳೆಯರನ್ನು ಮನೆಗೆ ಕರೆದೊಯ್ದು ಸುರಕ್ಷಿತವಾಗಿ ತಲುಪಿಸುವ ಯೋಜನೆಯೊಂದನ್ನು ನಗರ ಪೊಲೀಸರು ಜಾರಿಗೆ ತಂದಿದ್ದಾರೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶವೊಂದು ಹರಿದಾಡುತ್ತಿದ್ದು, ‘ಅದು ಸುಳ್ಳು ಸುದ್ದಿ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.</p><p>ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆ ವೇಳೆಯಲ್ಲಿ ಮನೆಗೆ ತೆರಳಬೇಕಾದ ಮಹಿಳೆಯರು ಸಹಾಯವಾಣಿ(1091 ಹಾಗೂ 7837018555) ಕರೆ ಮಾಡಿ ವಾಹನಕ್ಕೆ ಕೋರಿಕೆ ಸಲ್ಲಿಸಿದರೆ ಅಲ್ಲಿಗೆ ಹತ್ತಿರದ ಠಾಣೆ ಪೊಲೀಸರು ಬಂದು ಮನೆಗೆ ಕರೆದೊಯ್ದು ಬಿಡುತ್ತಾರೆ. ಪ್ರಯಾಣ ಉಚಿತವಾಗಿರುತ್ತದೆ. ಈ ಸಂದೇಶವನ್ನು ಎಲ್ಲರಿಗೂ ಕಳುಹಿಸಿ ಎಂಬ ಸಂದೇಶ ಹರಿದಾಡುತ್ತಿದೆ.</p><p>ಎಲ್ಲ ಮಹಿಳೆಯರಿಗೂ ಅನ್ವಯ ಆಗುವಂತೆ ಈ ರೀತಿಯ ಉಚಿತ ಪ್ರಯಾಣ ಯೋಜನೆ ಜಾರಿ ಆಗಿಲ್ಲ. ಯಾವುದಾದರೂ ತುರ್ತು ಅಥವಾ ಅಪಾಯದ ಸಂದರ್ಭದಲ್ಲಿ ಮಹಿಳೆಯರು ಕರೆ ಮಾಡಿದರೆ ಅವರು ತಲುಪಬೇಕಾದ ಸ್ಥಳಕ್ಕೆ ಬಿಡಲಾಗುತ್ತಿದೆ. 2019ರಲ್ಲೂ ಇದೇ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಉದ್ಯೋಗಸ್ಥ ಮಹಿಳೆಯರನ್ನು ಮನೆಗೆ ಕರೆದೊಯ್ದು ಸುರಕ್ಷಿತವಾಗಿ ತಲುಪಿಸುವ ಯೋಜನೆಯೊಂದನ್ನು ನಗರ ಪೊಲೀಸರು ಜಾರಿಗೆ ತಂದಿದ್ದಾರೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶವೊಂದು ಹರಿದಾಡುತ್ತಿದ್ದು, ‘ಅದು ಸುಳ್ಳು ಸುದ್ದಿ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟನೆ ನೀಡಿದ್ದಾರೆ.</p><p>ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆ ವೇಳೆಯಲ್ಲಿ ಮನೆಗೆ ತೆರಳಬೇಕಾದ ಮಹಿಳೆಯರು ಸಹಾಯವಾಣಿ(1091 ಹಾಗೂ 7837018555) ಕರೆ ಮಾಡಿ ವಾಹನಕ್ಕೆ ಕೋರಿಕೆ ಸಲ್ಲಿಸಿದರೆ ಅಲ್ಲಿಗೆ ಹತ್ತಿರದ ಠಾಣೆ ಪೊಲೀಸರು ಬಂದು ಮನೆಗೆ ಕರೆದೊಯ್ದು ಬಿಡುತ್ತಾರೆ. ಪ್ರಯಾಣ ಉಚಿತವಾಗಿರುತ್ತದೆ. ಈ ಸಂದೇಶವನ್ನು ಎಲ್ಲರಿಗೂ ಕಳುಹಿಸಿ ಎಂಬ ಸಂದೇಶ ಹರಿದಾಡುತ್ತಿದೆ.</p><p>ಎಲ್ಲ ಮಹಿಳೆಯರಿಗೂ ಅನ್ವಯ ಆಗುವಂತೆ ಈ ರೀತಿಯ ಉಚಿತ ಪ್ರಯಾಣ ಯೋಜನೆ ಜಾರಿ ಆಗಿಲ್ಲ. ಯಾವುದಾದರೂ ತುರ್ತು ಅಥವಾ ಅಪಾಯದ ಸಂದರ್ಭದಲ್ಲಿ ಮಹಿಳೆಯರು ಕರೆ ಮಾಡಿದರೆ ಅವರು ತಲುಪಬೇಕಾದ ಸ್ಥಳಕ್ಕೆ ಬಿಡಲಾಗುತ್ತಿದೆ. 2019ರಲ್ಲೂ ಇದೇ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದರು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>