<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ ರೈಲು ಯೋಜನೆಯ 1 ಮತ್ತು 2ನೇ ಹಂತದ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಷರತ್ತುಗಳನ್ನು ಪಾಲಿಸಿದೆಯೇ, ಇಲ್ಲವೇ ಎಂಬ ಬಗ್ಗೆ ವರದಿ ಸಲ್ಲಿಸಿ’ ಎಂದು ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.</p>.<p>ಈ ಕುರಿತಂತೆ ದೊಮ್ಮಲೂರು ನಿವಾಸಿ ಡಿ.ಟಿ. ದೇವರೆ ಹಾಗೂ ‘ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>‘ಯೋಜನೆಗೆ ಅನುಮೋದನೆ ನೀಡುವಾಗ ವಿಧಿಸಲಾಗಿರುವ ಷರತ್ತುಗಳನ್ನು ರಾಜ್ಯ ಸರ್ಕಾರ ಹಾಗೂ ಬಿಎಂಆರ್ಸಿಎಲ್ ವತಿಯಿಂದ ಪಾಲನೆ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲಿಸಿ ಮಾರ್ಚ್ 16ರೊಳಗೆ ವರದಿ ಸಲ್ಲಿಸಿ’ ಎಂದು ನ್ಯಾಯಪೀಠ ನಿರ್ದೇಶಿಸಿದೆ.</p>.<p>‘ಷರತ್ತುಗಳನ್ನು ಪಾಲಿಸಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದರೆ, ಪ್ರಗತಿಯಲ್ಲಿರುವ ಕಾಮಗಾರಿ ಸ್ಥಗಿತಗೊಳಿಸಲು ಆದೇಶಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ರಾಜ್ಯ ಸರ್ಕಾರ ಮತ್ತು ಬಿಎಂಆರ್ಸಿಎಲ್ಗೆ ಎಚ್ಚರಿಸಿ, ವಿಚಾರಣೆ ಮುಂದೂಡಿದೆ.</p>.<p>ಹೆದ್ದಾರಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯಗಳನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ ರೈಲು ಯೋಜನೆಯ 1 ಮತ್ತು 2ನೇ ಹಂತದ ಅನುಷ್ಠಾನದಲ್ಲಿ ರಾಜ್ಯ ಸರ್ಕಾರ ಹಾಗೂ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಷರತ್ತುಗಳನ್ನು ಪಾಲಿಸಿದೆಯೇ, ಇಲ್ಲವೇ ಎಂಬ ಬಗ್ಗೆ ವರದಿ ಸಲ್ಲಿಸಿ’ ಎಂದು ಹೈಕೋರ್ಟ್, ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.</p>.<p>ಈ ಕುರಿತಂತೆ ದೊಮ್ಮಲೂರು ನಿವಾಸಿ ಡಿ.ಟಿ. ದೇವರೆ ಹಾಗೂ ‘ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>‘ಯೋಜನೆಗೆ ಅನುಮೋದನೆ ನೀಡುವಾಗ ವಿಧಿಸಲಾಗಿರುವ ಷರತ್ತುಗಳನ್ನು ರಾಜ್ಯ ಸರ್ಕಾರ ಹಾಗೂ ಬಿಎಂಆರ್ಸಿಎಲ್ ವತಿಯಿಂದ ಪಾಲನೆ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲಿಸಿ ಮಾರ್ಚ್ 16ರೊಳಗೆ ವರದಿ ಸಲ್ಲಿಸಿ’ ಎಂದು ನ್ಯಾಯಪೀಠ ನಿರ್ದೇಶಿಸಿದೆ.</p>.<p>‘ಷರತ್ತುಗಳನ್ನು ಪಾಲಿಸಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದರೆ, ಪ್ರಗತಿಯಲ್ಲಿರುವ ಕಾಮಗಾರಿ ಸ್ಥಗಿತಗೊಳಿಸಲು ಆದೇಶಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ರಾಜ್ಯ ಸರ್ಕಾರ ಮತ್ತು ಬಿಎಂಆರ್ಸಿಎಲ್ಗೆ ಎಚ್ಚರಿಸಿ, ವಿಚಾರಣೆ ಮುಂದೂಡಿದೆ.</p>.<p>ಹೆದ್ದಾರಿ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯಗಳನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>