<p><strong>ಬೆಂಗಳೂರು:</strong> ನಮ್ಮ ಮೆಟ್ರೊ ಪ್ರಯಾಣಿಕರಿಗೆ ದಟ್ಟಣೆ ಅವಧಿಯಲ್ಲಿ ಶೇ 15 ಹಾಗೂ ದಟ್ಟಣೆ ರಹಿತ ಅವಧಿಯಲ್ಲಿ ಶೇ 20 ರಿಯಾಯಿತಿ ನೀಡಬೇಕು ಎಂದು ಬೆಂಗಳೂರು ಮೆಟ್ರೊ ಮತ್ತು ಉಪನಗರ ರೈಲು ಪ್ರಯಾಣಿಕರ ಸಂಘದ ಅಧ್ಯಕ್ಷ ಪ್ರಕಾಶ್ ಮಂಡೋತ್ ಆಗ್ರಹಿಸಿದ್ದಾರೆ.</p>.<p>ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಿರುವ ಅವರು, ‘ಸ್ಮಾರ್ಟ್ಕಾರ್ಡ್ ಮಾತ್ರವಲ್ಲ ಕ್ಯೂಆರ್ ಕೋಡ್ ಬಳಸಿ ಪ್ರಯಾಣ ಮಾಡುವವರಿಗೂ ಈ ರಿಯಾಯಿತಿಯನ್ನು ಒದಗಿಸಬೇಕು. ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಿಂಗಳ ಪಾಸ್ಗಳನ್ನು ಶೇ 35ರಷ್ಟು ರಿಯಾಯಿತಿಯಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಸ್ಮಾರ್ಟ್ ಕಾರ್ಡ್ಗಳಿಗೆ ಟಾಪ್ಅಪ್ಗಳಿಗೆ ವಿಶೇಷ ರಿಯಾಯಿತಿಯನ್ನು ನೀಡಬೇಕು. ₹ 1,000 ಟಾಪ್ಅಪ್ ಮಾಡಿಸುವವರಿಗೆ ಶೇ 10 ರಿಂದ ಶೇ 15ರಷ್ಟು ಹೆಚ್ಚುವರಿ ಮೌಲ್ಯ ಜಮಾ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.</p>.<p>ಕೊನೆಯ ಮೈಲ್ ಸಂಪರ್ಕಕ್ಕಾಗಿ ಬಿಎಂಟಿಸಿ ಬಸ್ಗಳನ್ನು ಹೆಚ್ಚಿಸಬೇಕು. ಕೈಗೆಟಕುವ ದರದಲ್ಲಿ ಇ–ರಿಕ್ಷಾ, ಇ.ಸ್ಕೂಟರ್ಗಳನ್ನು ಪರಿಚಯಿಸಬೇಕು. ಪ್ರಯಾಣೇತರ ಆದಾಯ ಹೆಚ್ಚಿಸಲು ಕೊರಿಯರ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಮ್ಮ ಮೆಟ್ರೊ ಪ್ರಯಾಣಿಕರಿಗೆ ದಟ್ಟಣೆ ಅವಧಿಯಲ್ಲಿ ಶೇ 15 ಹಾಗೂ ದಟ್ಟಣೆ ರಹಿತ ಅವಧಿಯಲ್ಲಿ ಶೇ 20 ರಿಯಾಯಿತಿ ನೀಡಬೇಕು ಎಂದು ಬೆಂಗಳೂರು ಮೆಟ್ರೊ ಮತ್ತು ಉಪನಗರ ರೈಲು ಪ್ರಯಾಣಿಕರ ಸಂಘದ ಅಧ್ಯಕ್ಷ ಪ್ರಕಾಶ್ ಮಂಡೋತ್ ಆಗ್ರಹಿಸಿದ್ದಾರೆ.</p>.<p>ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಿರುವ ಅವರು, ‘ಸ್ಮಾರ್ಟ್ಕಾರ್ಡ್ ಮಾತ್ರವಲ್ಲ ಕ್ಯೂಆರ್ ಕೋಡ್ ಬಳಸಿ ಪ್ರಯಾಣ ಮಾಡುವವರಿಗೂ ಈ ರಿಯಾಯಿತಿಯನ್ನು ಒದಗಿಸಬೇಕು. ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಿಂಗಳ ಪಾಸ್ಗಳನ್ನು ಶೇ 35ರಷ್ಟು ರಿಯಾಯಿತಿಯಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಸ್ಮಾರ್ಟ್ ಕಾರ್ಡ್ಗಳಿಗೆ ಟಾಪ್ಅಪ್ಗಳಿಗೆ ವಿಶೇಷ ರಿಯಾಯಿತಿಯನ್ನು ನೀಡಬೇಕು. ₹ 1,000 ಟಾಪ್ಅಪ್ ಮಾಡಿಸುವವರಿಗೆ ಶೇ 10 ರಿಂದ ಶೇ 15ರಷ್ಟು ಹೆಚ್ಚುವರಿ ಮೌಲ್ಯ ಜಮಾ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.</p>.<p>ಕೊನೆಯ ಮೈಲ್ ಸಂಪರ್ಕಕ್ಕಾಗಿ ಬಿಎಂಟಿಸಿ ಬಸ್ಗಳನ್ನು ಹೆಚ್ಚಿಸಬೇಕು. ಕೈಗೆಟಕುವ ದರದಲ್ಲಿ ಇ–ರಿಕ್ಷಾ, ಇ.ಸ್ಕೂಟರ್ಗಳನ್ನು ಪರಿಚಯಿಸಬೇಕು. ಪ್ರಯಾಣೇತರ ಆದಾಯ ಹೆಚ್ಚಿಸಲು ಕೊರಿಯರ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>