<p><strong>ಯಲಹಂಕ:</strong> ‘2025ರ ವೇಳೆಗೆ ನಮ್ಮ ಮೆಟ್ರೊ ರೈಲು ಮಾರ್ಗವನ್ನು 300 ಕಿ.ಮೀ.ಗೆ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಯಲಹಂಕ ಉಪನಗರದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘2021ರ ಅಂತ್ಯದೊಳಗೆ ನಮ್ಮ ಮೆಟ್ರೊ 2ನೇ ಹಂತದ ಯೋಜನೆ ಪೂರ್ಣಗೊಳ್ಳಲಿದೆ. ಹೊರವರ್ತುಲ ರಸ್ತೆ ಮೂಲಕ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೊ ಸಂಪರ್ಕ ಕಲ್ಪಿಸುವ ಯೋಜನೆ 2023ರಲ್ಲಿ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದರು.</p>.<p>‘ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಲಪಡಿಸಲು ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಮೆಟ್ರೊ 3ನೇ ಹಂತದ ಯೋಜನೆಯನ್ನು ಹೊಸಕೋಟೆ ತನಕ ವಿಸ್ತರಿಸಲು ತೀರ್ಮಾನಿಸಲಾಗಿದೆ’ ಎಂದರು.</p>.<p>ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ‘ಯಲಹಂಕ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ದಲಿತರ ಸ್ಮಶಾನ ಹಾಗೂ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಮೀಸಲಿಡಲಾಗುವುದು. ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡ ಬಡವರಿಗೆ ಅಕ್ರಮ– ಸಕ್ರಮ ಯೋಜನೆಯಡಿ ಹಕ್ಕು ಪತ್ರ ವಿತರಿಸಿರುವುದು ಸ್ವಾಗತಾರ್ಹ’ ಎಂದರು.</p>.<p>ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ‘ಎಲ್ಲ ಸಮಸ್ಯೆಗಳಿಗೆ ಪರಿಹಾರ ಕೊಡಬಲ್ಲ ಸೂತ್ರವನ್ನು ಒಳಗೊಂಡ ಜಗತ್ತಿನ ಏಕೈಕ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದಾರೆ. ಅವರ ಹೆಸರಿನಲ್ಲಿ ಭವನ ನಿರ್ಮಿಸಿರುವುದು ಅರ್ಥಪೂರ್ಣ’ ಎಂದು ಹೇಳಿದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್, ‘ಅಂಬೇಡ್ಕರ್ ಭವನ ನಿರ್ಮಾಣ ಆಗಬೇಕೆಂದು ಏಳೆಂಟು ವರ್ಷಗಳಿಂದ ದಲಿತ ಸಂಘಟನೆಗಳ ಮುಖಂಡರು ಒತ್ತಾಯ ಮಾಡುತ್ತಿದ್ದರು. ಬಹುದಿನಗಳ ಅವರ ಬೇಡಿಕೆ ಈಡೇರಿದೆ. ಈ ಭಾಗದ ಜನರ ಕಾರ್ಯಕ್ರಮಗಳಿಗೆ ಕಡಿಮೆ ಬಡಿಗೆ ಶುಲ್ಕ ನಿಗದಿ ಮಾಡುತ್ತೇವೆ’ ಎಂದು ತಿಳಿಸಿದರು.</p>.<p>₹400 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇದೇ ವೇಳೆ ಮುಖ್ಯಮಂತ್ರಿ ಚಾಲನೆ ನೀಡಿದರು.</p>.<p><strong>ಸುಸಜ್ಜಿತ ಭವನ</strong></p>.<p>ಬಿಬಿಎಂಪಿ ವತಿಯಿಂದ ಯಲಹಂಕ ಉಪನಗರದಲ್ಲಿ ₹11 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮೂರು ಅಂತಸ್ತುಗಳ ಅಂಬೇಡ್ಕರ್ ಭವನದಲ್ಲಿ 432 ಆಸನಗಳ ವ್ಯವಸ್ಥೆ ಇದೆ.</p>.<p>ಸಂಪೂರ್ಣ ಹವಾನಿಯಂತ್ರಿತ ಕೊಠಡಿಯಲ್ಲಿ ಡಿಟಿಎಸ್ ಧ್ವನಿವರ್ಧಕ ಸೌಲಭ್ಯ, 7 ಪರದೆಗಳನ್ನು ಒಳಗೊಂಡ ವೇದಿಕೆ ನಿರ್ಮಿಸಲಾಗಿದೆ. ಮೊದಲ ಅಂತಸ್ತಿನಲ್ಲಿ 1 ಸಾವಿರ ಆಸನ ವ್ಯವಸ್ಥೆಯ ವಿಶಾಲವಾದ ಸಭಾಂಗಣವಿದೆ. ನೆಲಮಹಡಿಯಲ್ಲಿ ವಾಹನ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ‘2025ರ ವೇಳೆಗೆ ನಮ್ಮ ಮೆಟ್ರೊ ರೈಲು ಮಾರ್ಗವನ್ನು 300 ಕಿ.ಮೀ.ಗೆ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ಯಲಹಂಕ ಉಪನಗರದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘2021ರ ಅಂತ್ಯದೊಳಗೆ ನಮ್ಮ ಮೆಟ್ರೊ 2ನೇ ಹಂತದ ಯೋಜನೆ ಪೂರ್ಣಗೊಳ್ಳಲಿದೆ. ಹೊರವರ್ತುಲ ರಸ್ತೆ ಮೂಲಕ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೊ ಸಂಪರ್ಕ ಕಲ್ಪಿಸುವ ಯೋಜನೆ 2023ರಲ್ಲಿ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದರು.</p>.<p>‘ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಲಪಡಿಸಲು ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಮೆಟ್ರೊ 3ನೇ ಹಂತದ ಯೋಜನೆಯನ್ನು ಹೊಸಕೋಟೆ ತನಕ ವಿಸ್ತರಿಸಲು ತೀರ್ಮಾನಿಸಲಾಗಿದೆ’ ಎಂದರು.</p>.<p>ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ‘ಯಲಹಂಕ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ದಲಿತರ ಸ್ಮಶಾನ ಹಾಗೂ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಮೀಸಲಿಡಲಾಗುವುದು. ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡ ಬಡವರಿಗೆ ಅಕ್ರಮ– ಸಕ್ರಮ ಯೋಜನೆಯಡಿ ಹಕ್ಕು ಪತ್ರ ವಿತರಿಸಿರುವುದು ಸ್ವಾಗತಾರ್ಹ’ ಎಂದರು.</p>.<p>ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ‘ಎಲ್ಲ ಸಮಸ್ಯೆಗಳಿಗೆ ಪರಿಹಾರ ಕೊಡಬಲ್ಲ ಸೂತ್ರವನ್ನು ಒಳಗೊಂಡ ಜಗತ್ತಿನ ಏಕೈಕ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದ್ದಾರೆ. ಅವರ ಹೆಸರಿನಲ್ಲಿ ಭವನ ನಿರ್ಮಿಸಿರುವುದು ಅರ್ಥಪೂರ್ಣ’ ಎಂದು ಹೇಳಿದರು.</p>.<p>ಶಾಸಕ ಎಸ್.ಆರ್.ವಿಶ್ವನಾಥ್, ‘ಅಂಬೇಡ್ಕರ್ ಭವನ ನಿರ್ಮಾಣ ಆಗಬೇಕೆಂದು ಏಳೆಂಟು ವರ್ಷಗಳಿಂದ ದಲಿತ ಸಂಘಟನೆಗಳ ಮುಖಂಡರು ಒತ್ತಾಯ ಮಾಡುತ್ತಿದ್ದರು. ಬಹುದಿನಗಳ ಅವರ ಬೇಡಿಕೆ ಈಡೇರಿದೆ. ಈ ಭಾಗದ ಜನರ ಕಾರ್ಯಕ್ರಮಗಳಿಗೆ ಕಡಿಮೆ ಬಡಿಗೆ ಶುಲ್ಕ ನಿಗದಿ ಮಾಡುತ್ತೇವೆ’ ಎಂದು ತಿಳಿಸಿದರು.</p>.<p>₹400 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇದೇ ವೇಳೆ ಮುಖ್ಯಮಂತ್ರಿ ಚಾಲನೆ ನೀಡಿದರು.</p>.<p><strong>ಸುಸಜ್ಜಿತ ಭವನ</strong></p>.<p>ಬಿಬಿಎಂಪಿ ವತಿಯಿಂದ ಯಲಹಂಕ ಉಪನಗರದಲ್ಲಿ ₹11 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮೂರು ಅಂತಸ್ತುಗಳ ಅಂಬೇಡ್ಕರ್ ಭವನದಲ್ಲಿ 432 ಆಸನಗಳ ವ್ಯವಸ್ಥೆ ಇದೆ.</p>.<p>ಸಂಪೂರ್ಣ ಹವಾನಿಯಂತ್ರಿತ ಕೊಠಡಿಯಲ್ಲಿ ಡಿಟಿಎಸ್ ಧ್ವನಿವರ್ಧಕ ಸೌಲಭ್ಯ, 7 ಪರದೆಗಳನ್ನು ಒಳಗೊಂಡ ವೇದಿಕೆ ನಿರ್ಮಿಸಲಾಗಿದೆ. ಮೊದಲ ಅಂತಸ್ತಿನಲ್ಲಿ 1 ಸಾವಿರ ಆಸನ ವ್ಯವಸ್ಥೆಯ ವಿಶಾಲವಾದ ಸಭಾಂಗಣವಿದೆ. ನೆಲಮಹಡಿಯಲ್ಲಿ ವಾಹನ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>