ಬೆಂಗಳೂರು: ನಿರ್ಮಾಣ ಹಂತದ ಮೆಟ್ರೊ ಪಿಲ್ಲರ್ ಕಬ್ಬಿಣದ ಚೌಕಟ್ಟು ಉರುಳಿಬಿದ್ದು ತಾಯಿ– ಮಗು ಮೃತಪಟ್ಟ ಪ್ರಕರಣದ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಿರುವ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ), ‘ಕಬ್ಬಿಣದ ಚೌಕಟ್ಟಿಗೆ ಆಸರೆಯಾಗಿ ಕಟ್ಟಲಾಗಿದ್ದ ಕಬ್ಬಿಣದ ಹಗ್ಗಗಳನ್ನು ತೆರವುಗೊಳಿಸಿದ ಬಳಿಕ ಒಂದು ದಿನ ಪೂರ್ತಿ ಅಸುರಕ್ಷಿತ ಸ್ಥಿತಿಯಲ್ಲೇ ಇತ್ತು. ಅನಾಹುತಕ್ಕೆ ಇದೇ ಕಾರಣ’ ಎಂದು ಅಭಿಪ್ರಾಯಪಟ್ಟಿದೆ.