‘ಯಾವುದೇ ಪಿಲ್ಲರ್ ನಲ್ಲಿ ಬಿರುಕು ಕಾಣಿಸಿಕೊಂಡಿಲ್ಲ. ಊಹಾಪೋಹಗಳನ್ನು ಆಧರಿಸಿ ಆರೋಪ ಮಾಡಲಾಗುತ್ತಿದೆ. ಗ್ರಾಹಕರ ಸುರಕ್ಷತೆಯ ಬಗ್ಗೆ ನಮಗೂ ಕಾಳಜಿ ಇರುತ್ತದೆ. ಬಿರುಕು ಬಿಟ್ಟಿದ್ದರೆ ನಾವೇ ಮಾಹಿತಿ ನೀಡುತ್ತಿದ್ದೆವು. ಎಂದಿನಂತೆ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ’ ಎಂದು ನಿಗಮದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚೌಹಾಣ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.