ಆಸ್ಪತ್ರೆ ವೆಚ್ಚ ಭರಿಸಿದ ಕೆಎಸ್ಆರ್ಟಿಸಿ: ‘ಚಾಲಕರಾದ ವೆಂಕಟರಾಮ ಹಾಗೂ ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದು, ಅವರಿಬ್ಬರು ಬಿಜಿಎಸ್ ಆಸ್ಪತ್ರೆಯಲ್ಲಿದ್ದಾರೆ. ಇನ್ನುಳಿದ ಗಾಯಾಳುಗಳಾದ ಸುಪ್ರಾ, ಪಿನಾಕಲ್ ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಚಿಕಿತ್ಸಾ ವೆಚ್ಚವನ್ನು ಕೆಎಸ್ಆರ್ಟಿಸಿ ವತಿಯಿಂದ ಭರಿಸಲಾಗುತ್ತಿದೆ’ ಎಂದು ನಿಗಮದ ಪತ್ರಿಕಾ ಪ್ರಕಟಣೆ ತಿಳಿಸಿದೆ.