<p><strong>ಬೆಂಗಳೂರು</strong>: ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲ ಆಗುವಂತೆ ಮೆಟ್ರೊ ರೈಲು ಸೇವೆಯನ್ನು ರಾತ್ರಿ 2 ಗಂಟೆ ತನಕ ವಿಸ್ತರಿಸಲಾಗಿದೆ.</p>.<p>ರಾತ್ರಿ 11.30ಕ್ಕೆ ಇದ್ದ ಕೊನೆಯ ರೈಲು ಸೇವೆಯನ್ನು ಡಿ.31ರಂದು ಬೆಳಗಿನ ಜಾವ 2 ಗಂಟೆ ತನಕ ವಿಸ್ತರಿಸಲಾಗಿದೆ. ಈ ಸಂದರ್ಭದಲ್ಲಿ ಪ್ರತಿ 15 ನಿಮಿಷಕ್ಕೊಂದು ರೈಲು ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.</p>.<p>ಬೈಯಪ್ಪನಹಳ್ಳಿಯಿಂದ 1.35 ಗಂಟೆಗೆ, ಕೆಂಗೇರಿಯಿಂದ 1.25ಕ್ಕೆ, ನಾಗಸಂದ್ರದಿಂದ 1.30ಕ್ಕೆ ಮತ್ತು ರೇಷ್ಮೆ ಸಂಸ್ಥೆಯಿಂದ 1.25ಕ್ಕೆ ಕೊನೆಯ ರೈಲು ಹೊರಡಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕೂ ಕಡೆಗೆ ಕೊನೆಯ ರೈಲುಗಳು ರಾತ್ರಿ 2 ಗಂಟೆಗೆ ಹೊರಡಲಿವೆ.</p>.<p>ಅಂದು ರಾತ್ರಿ 11.30ರ ನಂತರ ಎಂ.ಜಿ. ರಸ್ತೆ, ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಿಂದ ಪ್ರಯಾಣಿಸುವವರಿಗೆ ₹50 ಮೊತ್ತದ ಕಾಗದದ ಟಿಕೆಟ್ ವಿತರಿಸಲಾಗುವುದು. ಆ ಸಂದರ್ಭದಲ್ಲಿ ಈ ನಿಲ್ದಾಣಗಳಲ್ಲಿ ಟೋಕನ್ ವಿವರಣೆ ಇರುವುದಿಲ್ಲ. ಕಾಗದದ ಟಿಕೆಟ್ಗಳನ್ನು ಅಂದು ರಾತ್ರಿ 8 ಗಂಟೆಯಿಂದಲೇ ಎಲ್ಲಾ ಮೆಟ್ರೊ ನಿಲ್ದಾಣಗಳಲ್ಲಿ ಮುಂಚಿತವಾಗಿ ಖರೀದಿಸಲು ಅವಕಾಶ ಇದೆ.</p>.<p>ಸ್ಮಾರ್ಟ್ ಕಾರ್ಡ್ ಮತ್ತು ಕ್ಯೂಆರ್ ಕೋಡ್ ಟಿಕೆಟ್ ಹೊಂದಿರುವ ಪ್ರಯಾಣಿಕರು ಎಂದಿನಂತೆ ರಿಯಾಯಿತಿ ದರದಲ್ಲಿ ಪ್ರಯಾಣಿಸಬಹುದು ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲ ಆಗುವಂತೆ ಮೆಟ್ರೊ ರೈಲು ಸೇವೆಯನ್ನು ರಾತ್ರಿ 2 ಗಂಟೆ ತನಕ ವಿಸ್ತರಿಸಲಾಗಿದೆ.</p>.<p>ರಾತ್ರಿ 11.30ಕ್ಕೆ ಇದ್ದ ಕೊನೆಯ ರೈಲು ಸೇವೆಯನ್ನು ಡಿ.31ರಂದು ಬೆಳಗಿನ ಜಾವ 2 ಗಂಟೆ ತನಕ ವಿಸ್ತರಿಸಲಾಗಿದೆ. ಈ ಸಂದರ್ಭದಲ್ಲಿ ಪ್ರತಿ 15 ನಿಮಿಷಕ್ಕೊಂದು ರೈಲು ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.</p>.<p>ಬೈಯಪ್ಪನಹಳ್ಳಿಯಿಂದ 1.35 ಗಂಟೆಗೆ, ಕೆಂಗೇರಿಯಿಂದ 1.25ಕ್ಕೆ, ನಾಗಸಂದ್ರದಿಂದ 1.30ಕ್ಕೆ ಮತ್ತು ರೇಷ್ಮೆ ಸಂಸ್ಥೆಯಿಂದ 1.25ಕ್ಕೆ ಕೊನೆಯ ರೈಲು ಹೊರಡಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ನಾಲ್ಕೂ ಕಡೆಗೆ ಕೊನೆಯ ರೈಲುಗಳು ರಾತ್ರಿ 2 ಗಂಟೆಗೆ ಹೊರಡಲಿವೆ.</p>.<p>ಅಂದು ರಾತ್ರಿ 11.30ರ ನಂತರ ಎಂ.ಜಿ. ರಸ್ತೆ, ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಿಂದ ಪ್ರಯಾಣಿಸುವವರಿಗೆ ₹50 ಮೊತ್ತದ ಕಾಗದದ ಟಿಕೆಟ್ ವಿತರಿಸಲಾಗುವುದು. ಆ ಸಂದರ್ಭದಲ್ಲಿ ಈ ನಿಲ್ದಾಣಗಳಲ್ಲಿ ಟೋಕನ್ ವಿವರಣೆ ಇರುವುದಿಲ್ಲ. ಕಾಗದದ ಟಿಕೆಟ್ಗಳನ್ನು ಅಂದು ರಾತ್ರಿ 8 ಗಂಟೆಯಿಂದಲೇ ಎಲ್ಲಾ ಮೆಟ್ರೊ ನಿಲ್ದಾಣಗಳಲ್ಲಿ ಮುಂಚಿತವಾಗಿ ಖರೀದಿಸಲು ಅವಕಾಶ ಇದೆ.</p>.<p>ಸ್ಮಾರ್ಟ್ ಕಾರ್ಡ್ ಮತ್ತು ಕ್ಯೂಆರ್ ಕೋಡ್ ಟಿಕೆಟ್ ಹೊಂದಿರುವ ಪ್ರಯಾಣಿಕರು ಎಂದಿನಂತೆ ರಿಯಾಯಿತಿ ದರದಲ್ಲಿ ಪ್ರಯಾಣಿಸಬಹುದು ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>