ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

​ಬೆಂಗಳೂರು: ಆಗಸ್ಟ್ 11–12ರಂದು ಮೆಟ್ರೊ ರೈಲು ಸಂಚಾರ ಭಾಗಶಃ ಸ್ಥಗಿತ

Last Updated 7 ಆಗಸ್ಟ್ 2021, 15:18 IST
ಅಕ್ಷರ ಗಾತ್ರ

ಬೆಂಗಳೂರು: ನಮ್ಮ ಮೆಟ್ರೊದ ಕೆಂಗೇರಿ ವಿಸ್ತರಿತ ಮಾರ್ಗವನ್ನು ಅಂತಿಮ ಕಾರ್ಯಾಚರಣೆಗೆ ಸಜ್ಜುಗೊಳಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಆ.11 ಮತ್ತು 12ರಂದು ನೇರಳೆ ಮಾರ್ಗದ ವಿಜಯನಗರ ಮತ್ತು ಮೈಸೂರು ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ರೈಲು ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ಹೇಳಿದೆ.

‘ಈ ಎರಡು ದಿನಗಳಂದು ಬೈಯಪ್ಪನಹಳ್ಳಿಯಿಂದ ವಿಜಯನಗರ ಮೆಟ್ರೊ ನಿಲ್ದಾಣಗಳ ನಡುವೆ ಮಾತ್ರ ಸೇವೆ ಲಭ್ಯ ಇರಲಿದೆ’ ಎಂದು ನಿಗಮವು ಪ್ರಕಟಣೆಯಲ್ಲಿ ಹೇಳಿದೆ.

‘ಕಾರ್ಯಾಚರಣೆ ಪೂರ್ಣಗೊಂಡ ನಂತರ, ಅಂದರೆ, ಆ. 13ರಿಂದ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣದವರೆಗಿನ ನೇರಳೆ ಮಾರ್ಗದಲ್ಲಿ ಎಂದಿನಂತೆ ಸೇವೆ ಲಭ್ಯ ಇರಲಿದೆ’ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಹಸಿರು ಮಾರ್ಗದ ನಾಗಸಂದ್ರದಿಂದ ರೇಷ್ಮೆ ಸಂಸ್ಥೆಯವರೆಗಿನ ಮೆಟ್ರೊ ರೈಲು ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದೂ ನಿಗಮ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT