<p><strong>ಬೆಂಗಳೂರು:</strong> ಜಕ್ಕೂರು ಏರೋಡ್ರೋಮ್ ಪಶ್ಚಿಮ ಭಾಗದಲ್ಲಿ ಎತ್ತರಿಸಿದ ಮೆಟ್ರೊ ರೈಲು ಮಾರ್ಗ ನಿರ್ಮಾಣ ವಿಷಯದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ನೀಡಿರುವ ಸಲಹೆ ಆಧರಿಸಿ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಸಲಹೆ ಪಾಲನೆ ಬಗ್ಗೆ ಆರು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿ ವಿಲೇವಾರಿ ಮಾಡಿತು.</p>.<p>ಜಕ್ಕೂರು ಏರೋಡ್ರೋಮ್ ರನ್ವೇಯಿಂದ 60 ಮೀಟರ್ ದೂರದಲ್ಲಿ ಎತ್ತರಿಸಿದ ಮೆಟ್ರೊ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ. ಯಾವುದೇ ನಿರ್ಮಾಣವನ್ನು ಈ ವಲಯದಲ್ಲಿ ಮಾಡಲು ನಿಷೇಧವಿದೆ ಎಂದು ನಗರದ ವಕೀಲ ಅಜಯ್ ಕುಮಾರ್ ಪಾಟೀಲ ಅರ್ಜಿ ಸಲ್ಲಿಸಿದ್ದರು.</p>.<p>ಮೆಟ್ರೊ ರೈಲು ಮಾರ್ಗದಿಂದ ಆಗಲಿರುವ ತೊಂದರೆ ಬಗ್ಗೆ ಡಿಜಿಸಿಎ ಮೇ 20ರಂದು ಬರೆದಿರುವ ಪತ್ರದಲ್ಲಿ ತಿಳಿಸಿದೆ. ತೊಂದರೆ ಆಗದಂತೆ ಕ್ರಮಗಳನ್ನು ಕೈಗೊಂಡ ಬಳಿಕ ನಿರ್ಧಾರವನ್ನು ಎನ್ಒಸಿ ಸಮಿತಿ ಮುಂದೆ ಸಲ್ಲಿಸಬೇಕು ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಕ್ಕೂರು ಏರೋಡ್ರೋಮ್ ಪಶ್ಚಿಮ ಭಾಗದಲ್ಲಿ ಎತ್ತರಿಸಿದ ಮೆಟ್ರೊ ರೈಲು ಮಾರ್ಗ ನಿರ್ಮಾಣ ವಿಷಯದಲ್ಲಿ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ನೀಡಿರುವ ಸಲಹೆ ಆಧರಿಸಿ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಸಲಹೆ ಪಾಲನೆ ಬಗ್ಗೆ ಆರು ತಿಂಗಳಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿ ವಿಲೇವಾರಿ ಮಾಡಿತು.</p>.<p>ಜಕ್ಕೂರು ಏರೋಡ್ರೋಮ್ ರನ್ವೇಯಿಂದ 60 ಮೀಟರ್ ದೂರದಲ್ಲಿ ಎತ್ತರಿಸಿದ ಮೆಟ್ರೊ ಮಾರ್ಗ ನಿರ್ಮಾಣ ಮಾಡಲಾಗುತ್ತಿದೆ. ಯಾವುದೇ ನಿರ್ಮಾಣವನ್ನು ಈ ವಲಯದಲ್ಲಿ ಮಾಡಲು ನಿಷೇಧವಿದೆ ಎಂದು ನಗರದ ವಕೀಲ ಅಜಯ್ ಕುಮಾರ್ ಪಾಟೀಲ ಅರ್ಜಿ ಸಲ್ಲಿಸಿದ್ದರು.</p>.<p>ಮೆಟ್ರೊ ರೈಲು ಮಾರ್ಗದಿಂದ ಆಗಲಿರುವ ತೊಂದರೆ ಬಗ್ಗೆ ಡಿಜಿಸಿಎ ಮೇ 20ರಂದು ಬರೆದಿರುವ ಪತ್ರದಲ್ಲಿ ತಿಳಿಸಿದೆ. ತೊಂದರೆ ಆಗದಂತೆ ಕ್ರಮಗಳನ್ನು ಕೈಗೊಂಡ ಬಳಿಕ ನಿರ್ಧಾರವನ್ನು ಎನ್ಒಸಿ ಸಮಿತಿ ಮುಂದೆ ಸಲ್ಲಿಸಬೇಕು ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>