<p><strong>ಬೆಂಗಳೂರು: </strong>‘ನಮ್ಮ ಮೆಟ್ರೊ’ ಎರಡನೇ ಹಂತದ ಮೊದಲ ವಿಸ್ತರಿತ ಮಾರ್ಗ ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆಯವರೆಗೆ ಶುಕ್ರವಾರದಿಂದ ಮೆಟ್ರೊ ರೈಲು ಸಂಚಾರ ಆರಂಭವಾಯಿತು.</p>.<p>ರೇಷ್ಮೆ ಸಂಸ್ಥೆಯಿಂದ ನಾಗಸಂದ್ರದ ಕಡೆಗೆ ಮೊದಲ ರೈಲು ಬೆಳಿಗ್ಗೆ 7ಕ್ಕೆ ಹೊರಟಿತು. ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ಇದ್ದರು. ರೇಷ್ಮೆ ಸಂಸ್ಥೆಯಿಂದ ಕೊನೆಯ ರೈಲು 8.55ಕ್ಕೆ, ನಾಗಸಂದ್ರದಿಂದ ಕೊನೆಯ ರೈಲು ರಾತ್ರಿ 9 ಕ್ಕೆ ಹೊರಡಲಿದೆ. ಈ ಮಾರ್ಗದಲ್ಲಿ ದಟ್ಟಣೆಯ ಅವಧಿಯಲ್ಲಿ 10 ನಿಮಿಷಕ್ಕೊಂದು, ದಟ್ಟಣೆ ಇಲ್ಲದ ಸಮಯದಲ್ಲಿ 15 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ.</p>.<p>‘ವಾಹನದಟ್ಟಣೆ, ಮಾಲಿನ್ಯ, ಸಮಯ ವ್ಯಯದಂತಹ ಸಮಸ್ಯೆಗಳು ಈಗ ಇಲ್ಲ. ಕನಕಪುರ ರಸ್ತೆಯಲ್ಲಿ ರೈಲು ಮಾರ್ಗ ವಿಸ್ತರಿಸುವುದರಿಂದ ತುಂಬಾ ಅನುಕೂಲವಾಗಿದೆ’ ಎಂದು ಪ್ರಯಾಣಿಕ ಡಾ. ಎ.ಭಾನು ಹೇಳಿದರು.</p>.<p><strong>ಪಾರ್ಕಿಂಗ್ ವ್ಯವಸ್ಥೆ: </strong>ಹೊಸದಾಗಿ ಕಾರ್ಯಾರಂಭಿಸಿರುವ ಐದು ನಿಲ್ದಾಣಗಳಲ್ಲಿ ಬಿಎಂಆರ್ ಸಿಎಲ್ ವತಿಯಿಂದ ವಾಹನ ನಿಲುಗಡೆ ಸೌಲಭ್ಯ ಕಲ್ಪಿಸಿಲ್ಲ. ಆದರೆ, ಕೋಣನಕುಂಟೆ ಕ್ರಾಸ್ ನಲ್ಲಿ ಖಾಸಗಿ ಕಂಪನಿಯು ಹಣ ಪಾವತಿಸಿ, ವಾಹನ ನಿಲುಗಡೆ ಮಾಡುವ ಸೌಲಭ್ಯ ಕಲ್ಪಿಸಿದೆ.</p>.<p>ಫ್ರಂಟಿಯರ್ ಪಾರ್ಕಿಂಗ್ ಕಂಪನಿ ಈ ಗುತ್ತಿಗೆ ಪಡೆದುಕೊಂಡಿದೆ. ಕಾರುಗಳಿಗೆ ದಿನಕ್ಕೆ ₹60, ದ್ವಿಚಕ್ರ ವಾಹನಗಳಿಗೆ ದಿನಕ್ಕೆ ₹30 ಪಾರ್ಕಿಂಗ್ ಶುಲ್ಕ ನಿಗದಿ ಮಾಡಲಾಗಿದೆ. ಗಂಟೆಗಳ ಲೆಕ್ಕದಲ್ಲಿಯೂ ವಾಹನ ನಿಲ್ಲಿಸಬಹುದಾಗಿದ್ದು, ಬೈಕ್ ಗೆ ಪ್ರತಿ ತಾಸಿಗೆ ₹5, ಕಾರುಗಳಿಗೆ ₹10 ಶುಲ್ಕ ನಿಗದಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನಮ್ಮ ಮೆಟ್ರೊ’ ಎರಡನೇ ಹಂತದ ಮೊದಲ ವಿಸ್ತರಿತ ಮಾರ್ಗ ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆಯವರೆಗೆ ಶುಕ್ರವಾರದಿಂದ ಮೆಟ್ರೊ ರೈಲು ಸಂಚಾರ ಆರಂಭವಾಯಿತು.</p>.<p>ರೇಷ್ಮೆ ಸಂಸ್ಥೆಯಿಂದ ನಾಗಸಂದ್ರದ ಕಡೆಗೆ ಮೊದಲ ರೈಲು ಬೆಳಿಗ್ಗೆ 7ಕ್ಕೆ ಹೊರಟಿತು. ಬೆರಳೆಣಿಕೆಯಷ್ಟು ಪ್ರಯಾಣಿಕರು ಮಾತ್ರ ಇದ್ದರು. ರೇಷ್ಮೆ ಸಂಸ್ಥೆಯಿಂದ ಕೊನೆಯ ರೈಲು 8.55ಕ್ಕೆ, ನಾಗಸಂದ್ರದಿಂದ ಕೊನೆಯ ರೈಲು ರಾತ್ರಿ 9 ಕ್ಕೆ ಹೊರಡಲಿದೆ. ಈ ಮಾರ್ಗದಲ್ಲಿ ದಟ್ಟಣೆಯ ಅವಧಿಯಲ್ಲಿ 10 ನಿಮಿಷಕ್ಕೊಂದು, ದಟ್ಟಣೆ ಇಲ್ಲದ ಸಮಯದಲ್ಲಿ 15 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ.</p>.<p>‘ವಾಹನದಟ್ಟಣೆ, ಮಾಲಿನ್ಯ, ಸಮಯ ವ್ಯಯದಂತಹ ಸಮಸ್ಯೆಗಳು ಈಗ ಇಲ್ಲ. ಕನಕಪುರ ರಸ್ತೆಯಲ್ಲಿ ರೈಲು ಮಾರ್ಗ ವಿಸ್ತರಿಸುವುದರಿಂದ ತುಂಬಾ ಅನುಕೂಲವಾಗಿದೆ’ ಎಂದು ಪ್ರಯಾಣಿಕ ಡಾ. ಎ.ಭಾನು ಹೇಳಿದರು.</p>.<p><strong>ಪಾರ್ಕಿಂಗ್ ವ್ಯವಸ್ಥೆ: </strong>ಹೊಸದಾಗಿ ಕಾರ್ಯಾರಂಭಿಸಿರುವ ಐದು ನಿಲ್ದಾಣಗಳಲ್ಲಿ ಬಿಎಂಆರ್ ಸಿಎಲ್ ವತಿಯಿಂದ ವಾಹನ ನಿಲುಗಡೆ ಸೌಲಭ್ಯ ಕಲ್ಪಿಸಿಲ್ಲ. ಆದರೆ, ಕೋಣನಕುಂಟೆ ಕ್ರಾಸ್ ನಲ್ಲಿ ಖಾಸಗಿ ಕಂಪನಿಯು ಹಣ ಪಾವತಿಸಿ, ವಾಹನ ನಿಲುಗಡೆ ಮಾಡುವ ಸೌಲಭ್ಯ ಕಲ್ಪಿಸಿದೆ.</p>.<p>ಫ್ರಂಟಿಯರ್ ಪಾರ್ಕಿಂಗ್ ಕಂಪನಿ ಈ ಗುತ್ತಿಗೆ ಪಡೆದುಕೊಂಡಿದೆ. ಕಾರುಗಳಿಗೆ ದಿನಕ್ಕೆ ₹60, ದ್ವಿಚಕ್ರ ವಾಹನಗಳಿಗೆ ದಿನಕ್ಕೆ ₹30 ಪಾರ್ಕಿಂಗ್ ಶುಲ್ಕ ನಿಗದಿ ಮಾಡಲಾಗಿದೆ. ಗಂಟೆಗಳ ಲೆಕ್ಕದಲ್ಲಿಯೂ ವಾಹನ ನಿಲ್ಲಿಸಬಹುದಾಗಿದ್ದು, ಬೈಕ್ ಗೆ ಪ್ರತಿ ತಾಸಿಗೆ ₹5, ಕಾರುಗಳಿಗೆ ₹10 ಶುಲ್ಕ ನಿಗದಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>