<p><strong>ಬೆಂಗಳೂರು: </strong>‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿ ನಿರ್ಮಾಣವಾಗುತ್ತಿರುವ ಮೆಟ್ರೊ ನಿಲ್ದಾಣಗಳ ಕೆಳಗೆ ಸಂಚರಿಸಬೇಕಾದರೆ ಜೀವ ಕೈಯಲ್ಲಿ ಹಿಡಿದುಕೊಳ್ಳುವ ಪರಿಸ್ಥಿತಿ ಇದೆ ಎಂದು ವಾಹನ ಸವಾರರು ದೂರುತ್ತಾರೆ.</p>.<p>ಮೈಸೂರು ರಸ್ತೆ–ಕೆಂಗೇರಿ ವಿಸ್ತರಿತ ಮಾರ್ಗದಲ್ಲಿ (ರೀಚ್ 2) ಆರು ನಿಲ್ದಾಣಗಳು ನಿರ್ಮಾಣವಾಗುತ್ತಿವೆ. ಈ ಎಲ್ಲ ನಿಲ್ದಾಣಗಳ ಕೆಳಗೆ ಕತ್ತಲು ಆವರಿಸಿದೆ.</p>.<p>‘ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಬೆಂಗಳೂರು ವಿಶ್ವವಿದ್ಯಾಲಯ, ಆರ್.ವಿ.ಕಾಲೇಜು, ಮೈಲಸಂದ್ರ ಹಾಗೂ ಕೆಂಗೇರಿಯಲ್ಲಿ ಮೆಟ್ರೊ ನಿಲ್ದಾಣ ತಲೆ ಎತ್ತಿವೆ. ಆದರೆ, ಈ ನಿಲ್ದಾಣಗಳ ಕೆಳಗೆ ತುಂಬಾ ಕತ್ತಲು ಇದೆ. ಹಗಲು ಹೊತ್ತಿನಲ್ಲಿಯೇ ವಾಹನದ ಲೈಟ್ ಹಾಕಿಕೊಂಡೇ ಸಂಚರಿಸಬೇಕು. ಕಾಮಗಾರಿ ನಡೆಯುತ್ತಿರುವುದರಿಂದ ಯಾವಾಗ ಯಾವ ಅನಾಹುತವಾಗುತ್ತದೆಯೋ ಎಂಬ ಆತಂಕ ಕಾಡುತ್ತದೆ’ ಎಂದು ವಾಹನ ಸವಾರ ಮಂಜುನಾಥ್ ಹೇಳುತ್ತಾರೆ.</p>.<p>‘ಈ ರಸ್ತೆಯಲ್ಲಿ ಹಲವು ಗುಂಡಿಗಳು ಇವೆ. ಕತ್ತಲಿನಲ್ಲಿ ಅವು ಕಾಣುವುದೇ ಇಲ್ಲ. ನಾನೂ ಸೇರಿ ಹಲವು ದ್ವಿಚಕ್ರ ವಾಹನ ಸವಾರರು ಇಲ್ಲಿ ಬಿದ್ದಿದ್ದೇವೆ. ಸಣ್ಣ–ಪುಟ್ಟ ಅಪಘಾತಗಳೂ ಆಗಿವೆ’ ಎಂದು ಅವರು ಹೇಳಿದರು.</p>.<p>‘ಸುಮಾರು 6 ಕಿ.ಮೀ. ಉದ್ದದವರೆಗೆ ಇದೇ ಸ್ಥಿತಿ ಇದೆ. ನಿಲ್ದಾಣಗಳು ಸಮೀಪಿಸಿದಾಗಲೆಲ್ಲ ಮೈಯೆಲ್ಲ ಕಣ್ಣಾಗಿ ವಾಹನ ಚಲಾಯಿಸಬೇಕು. ದೊಡ್ಡ ಗುಂಡಿಗಳಿಂದ ಕಾರಿಗೂ ಹಾನಿಯಾಗುತ್ತಿದೆ’ ಎಂದು ರಮೇಶ್ ಎಂಬುವರು ದೂರಿದರು.</p>.<p>‘ನಿಲ್ದಾಣ ನಿರ್ಮಾಣ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ರಸ್ತೆಯ ಮೇಲೆ ಮಾಡುವ ಕೆಲಸ ಯಾವುದೂ ಇಲ್ಲ ಅನಿಸುತ್ತದೆ. ರಸ್ತೆಯ ಬದಿಯಲ್ಲಿ ಇಟ್ಟಿರುವ ವಸ್ತುಗಳನ್ನು ತೆರವುಗೊಳಿಸಬೇಕು. ರಸ್ತೆಯ ಒಂದು ಭಾಗವನ್ನು ಕಾಮಗಾರಿಗೆ ಬಳಸಿಕೊಂಡರೂ ಉಳಿದ ಭಾಗ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು’ ಎಂದು ಅವರು ಸಲಹೆ ನೀಡುತ್ತಾರೆ.</p>.<p>‘ರಸ್ತೆಯ ಒಂದು ಭಾಗದಲ್ಲಿ ಸುಮಾರು ಒಂದು ಅಡಿ ಆಳದಷ್ಟು ಗುಂಡಿಗಳು ಇವೆ. ಮಳೆ ಬಂದಾಗ ನೀರು ತುಂಬಿಕೊಳ್ಳುತ್ತದೆ. ಕತ್ತಲಲ್ಲಿ ಕಾಣದೆ ಇರುವುದರಿಂದ ವಾಹನಗಳು ಅಪಘಾತಕ್ಕೆ ಈಡಾಗುತ್ತಿವೆ. ನಿಲ್ದಾಣದ ಕೆಳಗೆ ಬೆಳಕಿನ ವ್ಯವಸ್ಥೆಯನ್ನಾದರೂ ಮಾಡಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ರಸ್ತೆಯ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಳೆ ಸುರಿಯುತ್ತಿರುವುದರಿಂದ ಡಾಂಬರು ಹಾಕಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಮೆಟ್ರೊ ನಿಲ್ದಾಣದ ಕೆಳಗೆ ಬೆಳಕು ಇರುವಂತೆ ವ್ಯವಸ್ಥೆ ಮಾಡಲಾಗುವುದು’ ಎಂದು ನಿಗಮದ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಬಹುತೇಕರು ತುಂಬಾ ವೇಗವಾಗಿ ವಾಹನ ಚಲಾಯಿಸುತ್ತಾರೆ. ಅದರಿಂದಲೂ ಅಪಘಾತಗಳು ಆಗುತ್ತಿವೆ. ಸಂಚಾರ ಪೊಲೀಸರು ದಂಡ ವಿಧಿಸುತ್ತಿದ್ದರೂ ವೇಗಕ್ಕೆ ಕಡಿವಾಣ ಇಲ್ಲದಂತಾಗಿದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನಮ್ಮ ಮೆಟ್ರೊ’ ಎರಡನೇ ಹಂತದಲ್ಲಿ ನಿರ್ಮಾಣವಾಗುತ್ತಿರುವ ಮೆಟ್ರೊ ನಿಲ್ದಾಣಗಳ ಕೆಳಗೆ ಸಂಚರಿಸಬೇಕಾದರೆ ಜೀವ ಕೈಯಲ್ಲಿ ಹಿಡಿದುಕೊಳ್ಳುವ ಪರಿಸ್ಥಿತಿ ಇದೆ ಎಂದು ವಾಹನ ಸವಾರರು ದೂರುತ್ತಾರೆ.</p>.<p>ಮೈಸೂರು ರಸ್ತೆ–ಕೆಂಗೇರಿ ವಿಸ್ತರಿತ ಮಾರ್ಗದಲ್ಲಿ (ರೀಚ್ 2) ಆರು ನಿಲ್ದಾಣಗಳು ನಿರ್ಮಾಣವಾಗುತ್ತಿವೆ. ಈ ಎಲ್ಲ ನಿಲ್ದಾಣಗಳ ಕೆಳಗೆ ಕತ್ತಲು ಆವರಿಸಿದೆ.</p>.<p>‘ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಬೆಂಗಳೂರು ವಿಶ್ವವಿದ್ಯಾಲಯ, ಆರ್.ವಿ.ಕಾಲೇಜು, ಮೈಲಸಂದ್ರ ಹಾಗೂ ಕೆಂಗೇರಿಯಲ್ಲಿ ಮೆಟ್ರೊ ನಿಲ್ದಾಣ ತಲೆ ಎತ್ತಿವೆ. ಆದರೆ, ಈ ನಿಲ್ದಾಣಗಳ ಕೆಳಗೆ ತುಂಬಾ ಕತ್ತಲು ಇದೆ. ಹಗಲು ಹೊತ್ತಿನಲ್ಲಿಯೇ ವಾಹನದ ಲೈಟ್ ಹಾಕಿಕೊಂಡೇ ಸಂಚರಿಸಬೇಕು. ಕಾಮಗಾರಿ ನಡೆಯುತ್ತಿರುವುದರಿಂದ ಯಾವಾಗ ಯಾವ ಅನಾಹುತವಾಗುತ್ತದೆಯೋ ಎಂಬ ಆತಂಕ ಕಾಡುತ್ತದೆ’ ಎಂದು ವಾಹನ ಸವಾರ ಮಂಜುನಾಥ್ ಹೇಳುತ್ತಾರೆ.</p>.<p>‘ಈ ರಸ್ತೆಯಲ್ಲಿ ಹಲವು ಗುಂಡಿಗಳು ಇವೆ. ಕತ್ತಲಿನಲ್ಲಿ ಅವು ಕಾಣುವುದೇ ಇಲ್ಲ. ನಾನೂ ಸೇರಿ ಹಲವು ದ್ವಿಚಕ್ರ ವಾಹನ ಸವಾರರು ಇಲ್ಲಿ ಬಿದ್ದಿದ್ದೇವೆ. ಸಣ್ಣ–ಪುಟ್ಟ ಅಪಘಾತಗಳೂ ಆಗಿವೆ’ ಎಂದು ಅವರು ಹೇಳಿದರು.</p>.<p>‘ಸುಮಾರು 6 ಕಿ.ಮೀ. ಉದ್ದದವರೆಗೆ ಇದೇ ಸ್ಥಿತಿ ಇದೆ. ನಿಲ್ದಾಣಗಳು ಸಮೀಪಿಸಿದಾಗಲೆಲ್ಲ ಮೈಯೆಲ್ಲ ಕಣ್ಣಾಗಿ ವಾಹನ ಚಲಾಯಿಸಬೇಕು. ದೊಡ್ಡ ಗುಂಡಿಗಳಿಂದ ಕಾರಿಗೂ ಹಾನಿಯಾಗುತ್ತಿದೆ’ ಎಂದು ರಮೇಶ್ ಎಂಬುವರು ದೂರಿದರು.</p>.<p>‘ನಿಲ್ದಾಣ ನಿರ್ಮಾಣ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ರಸ್ತೆಯ ಮೇಲೆ ಮಾಡುವ ಕೆಲಸ ಯಾವುದೂ ಇಲ್ಲ ಅನಿಸುತ್ತದೆ. ರಸ್ತೆಯ ಬದಿಯಲ್ಲಿ ಇಟ್ಟಿರುವ ವಸ್ತುಗಳನ್ನು ತೆರವುಗೊಳಿಸಬೇಕು. ರಸ್ತೆಯ ಒಂದು ಭಾಗವನ್ನು ಕಾಮಗಾರಿಗೆ ಬಳಸಿಕೊಂಡರೂ ಉಳಿದ ಭಾಗ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು’ ಎಂದು ಅವರು ಸಲಹೆ ನೀಡುತ್ತಾರೆ.</p>.<p>‘ರಸ್ತೆಯ ಒಂದು ಭಾಗದಲ್ಲಿ ಸುಮಾರು ಒಂದು ಅಡಿ ಆಳದಷ್ಟು ಗುಂಡಿಗಳು ಇವೆ. ಮಳೆ ಬಂದಾಗ ನೀರು ತುಂಬಿಕೊಳ್ಳುತ್ತದೆ. ಕತ್ತಲಲ್ಲಿ ಕಾಣದೆ ಇರುವುದರಿಂದ ವಾಹನಗಳು ಅಪಘಾತಕ್ಕೆ ಈಡಾಗುತ್ತಿವೆ. ನಿಲ್ದಾಣದ ಕೆಳಗೆ ಬೆಳಕಿನ ವ್ಯವಸ್ಥೆಯನ್ನಾದರೂ ಮಾಡಬೇಕು’ ಎಂದು ಅವರು ಒತ್ತಾಯಿಸಿದರು.</p>.<p>‘ರಸ್ತೆಯ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಳೆ ಸುರಿಯುತ್ತಿರುವುದರಿಂದ ಡಾಂಬರು ಹಾಕಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಮೆಟ್ರೊ ನಿಲ್ದಾಣದ ಕೆಳಗೆ ಬೆಳಕು ಇರುವಂತೆ ವ್ಯವಸ್ಥೆ ಮಾಡಲಾಗುವುದು’ ಎಂದು ನಿಗಮದ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಬಹುತೇಕರು ತುಂಬಾ ವೇಗವಾಗಿ ವಾಹನ ಚಲಾಯಿಸುತ್ತಾರೆ. ಅದರಿಂದಲೂ ಅಪಘಾತಗಳು ಆಗುತ್ತಿವೆ. ಸಂಚಾರ ಪೊಲೀಸರು ದಂಡ ವಿಧಿಸುತ್ತಿದ್ದರೂ ವೇಗಕ್ಕೆ ಕಡಿವಾಣ ಇಲ್ಲದಂತಾಗಿದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>