ಬೆಂಗಳೂರು:ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ ಹಸಿರು ಮಾರ್ಗದ ನಾಗಸಂದ್ರ ಮತ್ತು ಮಂತ್ರಿ ಸ್ಕ್ವೇರ್–ಸಂಪಿಗೆ ರಸ್ತೆ ನಿಲ್ದಾಣಗಳ ನಡುವೆ ಮಾ.8ರಂದು ಬೆಳಿಗ್ಗೆ 7ರಿಂದ 9ರವರೆಗೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ತಿಳಿಸಿದೆ.
ಮಹಾಕವಿ ಕುವೆಂಪು ರಸ್ತೆ ಮತ್ತು ರಾಜಾಜಿನಗರ ಮೆಟ್ರೊ ನಿಲ್ದಾಣಗಳ ನಡುವೆ ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ. ಅಂದು ಬೆಳಿಗ್ಗೆ 9ರ ನಂತರ, ಈ ನಿಲ್ದಾಣಗಳ ನಡುವೆ ರೈಲು ಸಂಚಾರ ಪುನರಾರಂಭಗೊಳ್ಳಲಿದೆ.
ಹಸಿರು ಮಾರ್ಗದ ಯಲಚೇನಹಳ್ಳಿ ಮತ್ತು ಮಂತ್ರಿ ಸ್ಕ್ವೇರ್–ಸಂಪಿಗೆ ರಸ್ತೆ ನಿಲ್ದಾಣಗಳ ನಡುವೆ ಮತ್ತು ನೇರಳೆ ಮಾರ್ಗದ ಮೆಟ್ರೊ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದೂ ನಿಗಮ ಹೇಳಿದೆ.