ಬೆಂಗಳೂರು: ‘ನಮ್ಮ ಮೆಟ್ರೊ’ದ ಎರಡನೇ ಹಂತದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಿಂಗ್ ಭಾನುವಾರ ಪರಿಶೀಲಿಸಿದರು.
ಸುಮಾರು 18.82 ಕಿ.ಮೀ. ದೂರದ ಆರ್.ವಿ. ರಸ್ತೆ- ಬೊಮ್ಮಸಂದ್ರ ನಡುವಿನ ಮೆಟ್ರೊ ಕಾಮಗಾರಿಗಳು, ಜಯದೇವ ಆಸ್ಪತ್ರೆ ಬಳಿಯ ಉತ್ತರ-ದಕ್ಷಿಣ ಪ್ರಯಾಣಿಕರ ವಿನಿಮಯ ಜಂಕ್ಷನ್ ಮತ್ತು ಕಾಸ್ಟಿಂಗ್ ಯಾರ್ಡ್ಗಳ ಪರಿಶೀಲನೆಯನ್ನು ಅವರು ನಡೆಸಿದರು.
‘ಲಾಕ್ಡೌನ್ ನಡುವೆಯೂ ‘ನಮ್ಮ ಮೆಟ್ರೋ’ ಎರಡನೇ ಹಂತದ ಕಾಮಗಾರಿಗಳನ್ನು ಎಲ್ಲ ಮುನ್ನೆಚ್ಚರಿಕೆ ತೆಗೆದುಕೊಂಡು ನಡೆಸಲಾಗುತ್ತಿದೆ. ಈ ಕಾಮಗಾರಿ ಯಾವುದೇ ಅಡ್ಡಿಯಿಲ್ಲದೆ ಮುಂದುವರಿಸಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ನಿಗಮದ ಹಿರಿಯ ಅಧಿಕಾರಿಗಳು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.