‘ಹೊರರಾಜ್ಯದಿಂದ ಬಂದ ಕಾರ್ಮಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ನಂತರ ಎಲ್ಲ ಕಾರ್ಮಿಕರ ಪರೀಕ್ಷೆ ನಡೆಸಲಾಯಿತು. ನಂತರ, ಈ ಪ್ರಕರಣಗಳು ಬೆಳಕಿಗೆ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ ಆ್ಯಂಡ್ ಟಿ ಕಂಪನಿಯು ಎಲ್ಲರ ಆರೋಗ್ಯ ತಪಾಸಣೆ ನಡೆಸಿದೆ. ಕೊರೊನಾ ಪಾಸಿಟಿವ್ ಬಂದಿರುವ ಎಲ್ಲ ಕಾರ್ಮಿಕರಿಗೆ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗಿದೆ’ ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್ ಚೌಹಾಣ್ ತಿಳಿಸಿದರು.