ಬೆಂಗಳೂರು: ರಾತ್ರಿ ಹೊತ್ತು ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಬೈಕ್ನಲ್ಲಿ ಹಿಂಬಾಲಿಸಿ ಹಣ ಮತ್ತು ಆಭರಣ ಸುಲಿಗೆ ಮಾಡುತ್ತಿದ್ದ ಮೂವರನ್ನು ಮೈಕೊ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ದೀಪಕ್ ಹಾಗೂ ಯೋಗೇಶ್ ಬಂಧಿತರು. ಮತ್ತೊಬ್ಬ ಆರೋಪಿ ಅಪ್ರಾಪ್ತ ಬಾಲಕ. ಇವರಿಂದ ₹10 ಸಾವಿರ ಮೌಲ್ಯದ ಮೊಬೈಲ್, ಚಾಕು, ಹಾಗೂ ಸ್ಕೂಟರ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
‘ನ.7ರ ಮಧ್ಯರಾತ್ರಿ ಹೋಟೆಲ್ ಕಾರ್ಮಿಕರೊಬ್ಬರು ಕೆಲಸ ಮುಗಿಸಿಕೊಂಡು ಮನೆಯತ್ತ ಹೋಗುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಆರೋಪಿಗಳು ಚಾಕುವಿನಿಂದ ಚುಚ್ಚುವುದಾಗಿ ಬೆದರಿಸಿ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದರು. ಅದಕ್ಕೂ ಮುನ್ನ ಜೆ.ಪಿ.ನಗರದಲ್ಲಿ ವ್ಯಕ್ತಿಯೊಬ್ಬರನ್ನು ಹೆದರಿಸಿ ಅವರಿಂದ ₹500 ಕಸಿದುಕೊಂಡಿದ್ದರು. ಬಳಿಕ ಆಡುಗೋಡಿಯಲ್ಲಿ ಸುಲಿಗೆ ಮಾಡಿದ್ದರು. ಈ ವಿಷಯವನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ’ ಎಂದುತಿಳಿಸಿದ್ದಾರೆ.