<p><strong>ಬೆಂಗಳೂರು:</strong> ಕಿರುಸಾಲ (ಮೈಕ್ರೊ ಫೈನಾನ್ಸ್)ಸಂಸ್ಥೆಗಳ ಸಾಲದ ಸುಳಿಯಲ್ಲಿ ಸಿಲುಕಿರುವ ಬಡ ಮಹಿಳೆಯರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ಋಣಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ಫೆ. 18ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಬಿ.ಎಂ.ಭಟ್, ‘ಬಡತನ ನಿರ್ಮೂಲನೆ, ಉದ್ಯೋಗವಕಾಶ ಹಾಗೂ ಮಹಿಳಾ ಸಬಲೀಕರಣ ಮಾಡುತ್ತೇವೆ ಎಂದು ಕಿರುಸಾಲ ನೀಡುವ ಸಂಸ್ಥೆಗಳು ದುಬಾರಿ ಬಡ್ಡಿ ವಿಧಿಸಿ ಗ್ರಾಮೀಣ ಭಾಗದ ಬಡ ಮಹಿಳೆಯರಿಂದ ಲೂಟಿ ಮಾಡುತ್ತಿವೆ’ ಎಂದು ದೂರಿದರು.</p>.<p>‘ಸರ್ಕಾರದ ಬಡ್ಡಿ ನಿಯಮದ ಪ್ರಕಾರ ಸಾಲಕ್ಕೆ ಶೇ 16ಕ್ಕಿಂತ ಹೆಚ್ಚಿನ ಬಡ್ಡಿ ವಸೂಲಿ ಮಾಡುವಂತಿಲ್ಲ. ಆದರೆ, ಈ ಕಿರುಸಾಲ ಸಂಸ್ಥೆಗಳು ನಿಯಮ ಮೀರಿ ಶೇ 19ರಿಂದ ಶೇ 31ರವರೆಗೆ ಬಡ್ಡಿ ವಿಧಿಸುತ್ತಿವೆ. ಹಣ ಮರುಪಾವತಿಗೆ ದುರ್ಬಲರಾದ ಮಹಿಳೆಯರೊಂದಿಗೆ ಸಂಸ್ಥೆಗಳು ಅಮಾನವೀಯವಾಗಿ ವರ್ತಿಸುತ್ತಿವೆ’ ಎಂದರು.</p>.<p>ಪ್ರಧಾನ ಕಾರ್ಯದರ್ಶಿ ಎನ್. ಅನಂತ ನಾಯಕ್, ‘ಇಂತಹ ಲೂಟಿ ಕೋರ ಸಂಸ್ಥೆಗಳನ್ನು ಸರ್ಕಾರ ಮುಟ್ಟು ಗೋಲು ಹಾಕಬೇಕು. ನಿಯಮ ಉಲ್ಲಂಘಿ ಸಿರುವ ಸಾಲಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸಾಲಮನ್ನಾ ಮಾಡಿ, ಋಣಮುಕ್ತಗೊಳಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಸಂತ್ರಸ್ತ ಮಹಿಳೆಯರು ಪ್ರತಿಭಟನೆ ನಡೆಸಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಿರುಸಾಲ (ಮೈಕ್ರೊ ಫೈನಾನ್ಸ್)ಸಂಸ್ಥೆಗಳ ಸಾಲದ ಸುಳಿಯಲ್ಲಿ ಸಿಲುಕಿರುವ ಬಡ ಮಹಿಳೆಯರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ಋಣಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ಫೆ. 18ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ.</p>.<p>ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಬಿ.ಎಂ.ಭಟ್, ‘ಬಡತನ ನಿರ್ಮೂಲನೆ, ಉದ್ಯೋಗವಕಾಶ ಹಾಗೂ ಮಹಿಳಾ ಸಬಲೀಕರಣ ಮಾಡುತ್ತೇವೆ ಎಂದು ಕಿರುಸಾಲ ನೀಡುವ ಸಂಸ್ಥೆಗಳು ದುಬಾರಿ ಬಡ್ಡಿ ವಿಧಿಸಿ ಗ್ರಾಮೀಣ ಭಾಗದ ಬಡ ಮಹಿಳೆಯರಿಂದ ಲೂಟಿ ಮಾಡುತ್ತಿವೆ’ ಎಂದು ದೂರಿದರು.</p>.<p>‘ಸರ್ಕಾರದ ಬಡ್ಡಿ ನಿಯಮದ ಪ್ರಕಾರ ಸಾಲಕ್ಕೆ ಶೇ 16ಕ್ಕಿಂತ ಹೆಚ್ಚಿನ ಬಡ್ಡಿ ವಸೂಲಿ ಮಾಡುವಂತಿಲ್ಲ. ಆದರೆ, ಈ ಕಿರುಸಾಲ ಸಂಸ್ಥೆಗಳು ನಿಯಮ ಮೀರಿ ಶೇ 19ರಿಂದ ಶೇ 31ರವರೆಗೆ ಬಡ್ಡಿ ವಿಧಿಸುತ್ತಿವೆ. ಹಣ ಮರುಪಾವತಿಗೆ ದುರ್ಬಲರಾದ ಮಹಿಳೆಯರೊಂದಿಗೆ ಸಂಸ್ಥೆಗಳು ಅಮಾನವೀಯವಾಗಿ ವರ್ತಿಸುತ್ತಿವೆ’ ಎಂದರು.</p>.<p>ಪ್ರಧಾನ ಕಾರ್ಯದರ್ಶಿ ಎನ್. ಅನಂತ ನಾಯಕ್, ‘ಇಂತಹ ಲೂಟಿ ಕೋರ ಸಂಸ್ಥೆಗಳನ್ನು ಸರ್ಕಾರ ಮುಟ್ಟು ಗೋಲು ಹಾಕಬೇಕು. ನಿಯಮ ಉಲ್ಲಂಘಿ ಸಿರುವ ಸಾಲಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸಾಲಮನ್ನಾ ಮಾಡಿ, ಋಣಮುಕ್ತಗೊಳಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಸಂತ್ರಸ್ತ ಮಹಿಳೆಯರು ಪ್ರತಿಭಟನೆ ನಡೆಸಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>