<p><strong>ಬೆಂಗಳೂರು</strong>: ಕನಿಷ್ಠ ವೇತನ ಜಾರಿಗೊಳಿಸಿ, ಕೆಲಸ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.</p>.<p>ರಾಜ್ಯದಾದ್ಯಂತ ಶಾಲೆಗಳಲ್ಲಿ ಒಟ್ಟು 1 ಲಕ್ಷ 16 ಸಾವಿರ ಬಿಸಿಯೂಟ ತಯಾರಕರಿದ್ದಾರೆ. ಮುಖ್ಯ ಅಡುಗೆಯವರಿಗೆ ತಿಂಗಳಿಗೆ ₹4,700, ಸಹಾಯಕ ಅಡುಗೆಯವರಿಗೆ ₹4,600 ವೇತನ ನೀಡುತ್ತಿದೆ. ಈ ವೇತನದಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು. </p>.<p>ಬಿಸಿಯೂಟ ತಯಾರಕರನ್ನು ಸ್ಕೀಮ್ ವರ್ಕರ್ಸ್ ಎನ್ನುವುದನ್ನು ಬದಲಾಯಿಸಿ ಕಾರ್ಮಿಕರೆಂದು ಪರಿಗಣಿಸಬೇಕು, ₹10 ಲಕ್ಷ ಮರಣ ಪರಿಹಾರ ನೀಡಬೇಕು ಹಾಗೂ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>100 ವಿದ್ಯಾರ್ಥಿಗಳು ಇರುವ ಶಾಲೆಗಳಲ್ಲಿ ಇಬ್ಬರು ಅಡುಗೆಯವರಿಗೆ ಕೆಲಸದ ಹೊರೆ ಆಗುತ್ತಿದೆ. ಅಂತಹ ಕಡೆ ಮೂವರನ್ನು ನೇಮಿಸಬೇಕು. ಮೊಟ್ಟೆ ಸುಲಿಯುವ ಭತ್ಯೆಯನ್ನು 30 ಪೈಸೆಯಿಂದ ₹1ಕ್ಕೆ ಏರಿಸಬೇಕು. ಈ ಹಣವನ್ನು ಶಾಲೆಯ ಮುಖ್ಯ ಅಡುಗೆಯವರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಇಡುಗಂಟು ಹಣವನ್ನು ₹2 ಲಕ್ಷಕ್ಕೆ ಹೆಚ್ಚಿಸಬೇಕು. ಪ್ರತಿ ತಿಂಗಳ 5ನೇ ತಾರೀಖು ಬ್ಯಾಂಕ್ ಖಾತೆಗೆ ವೇತನ ಜಮಾ ಮಾಡಬೇಕು. ಕೆಪಿಎಸ್ ಶಾಲೆಗಳನ್ನು ತೆರೆದರೆ ಹಾಲಿ ಬಿಸಿಯೂಟ ಯೋಜನೆಯಡಿ ಅಡುಗೆ ಮಾಡುತ್ತಿರುವವರನ್ನು, ಅಡುಗೆ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಪ್ರತಿಭಟನೆಯಲ್ಲಿ ಫೆಡರೇಷನ್ ಅಧ್ಯಕ್ಷ ಆವರಗೆರೆ ಚಂದ್ರು, ಪ್ರಧಾನ ಕಾರ್ಯದರ್ಶಿ ಜಿ.ಜಿ.ಅಕ್ಕಮ್ಮ, ಉಪ ಪ್ರಧಾನ ಕಾರ್ಯದರ್ಶಿ ಪುಷ್ಪಾ, ಬೆಳಲಗೆರೆ ರುದ್ರಮ್ಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕನಿಷ್ಠ ವೇತನ ಜಾರಿಗೊಳಿಸಿ, ಕೆಲಸ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.</p>.<p>ರಾಜ್ಯದಾದ್ಯಂತ ಶಾಲೆಗಳಲ್ಲಿ ಒಟ್ಟು 1 ಲಕ್ಷ 16 ಸಾವಿರ ಬಿಸಿಯೂಟ ತಯಾರಕರಿದ್ದಾರೆ. ಮುಖ್ಯ ಅಡುಗೆಯವರಿಗೆ ತಿಂಗಳಿಗೆ ₹4,700, ಸಹಾಯಕ ಅಡುಗೆಯವರಿಗೆ ₹4,600 ವೇತನ ನೀಡುತ್ತಿದೆ. ಈ ವೇತನದಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು. </p>.<p>ಬಿಸಿಯೂಟ ತಯಾರಕರನ್ನು ಸ್ಕೀಮ್ ವರ್ಕರ್ಸ್ ಎನ್ನುವುದನ್ನು ಬದಲಾಯಿಸಿ ಕಾರ್ಮಿಕರೆಂದು ಪರಿಗಣಿಸಬೇಕು, ₹10 ಲಕ್ಷ ಮರಣ ಪರಿಹಾರ ನೀಡಬೇಕು ಹಾಗೂ ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>100 ವಿದ್ಯಾರ್ಥಿಗಳು ಇರುವ ಶಾಲೆಗಳಲ್ಲಿ ಇಬ್ಬರು ಅಡುಗೆಯವರಿಗೆ ಕೆಲಸದ ಹೊರೆ ಆಗುತ್ತಿದೆ. ಅಂತಹ ಕಡೆ ಮೂವರನ್ನು ನೇಮಿಸಬೇಕು. ಮೊಟ್ಟೆ ಸುಲಿಯುವ ಭತ್ಯೆಯನ್ನು 30 ಪೈಸೆಯಿಂದ ₹1ಕ್ಕೆ ಏರಿಸಬೇಕು. ಈ ಹಣವನ್ನು ಶಾಲೆಯ ಮುಖ್ಯ ಅಡುಗೆಯವರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಇಡುಗಂಟು ಹಣವನ್ನು ₹2 ಲಕ್ಷಕ್ಕೆ ಹೆಚ್ಚಿಸಬೇಕು. ಪ್ರತಿ ತಿಂಗಳ 5ನೇ ತಾರೀಖು ಬ್ಯಾಂಕ್ ಖಾತೆಗೆ ವೇತನ ಜಮಾ ಮಾಡಬೇಕು. ಕೆಪಿಎಸ್ ಶಾಲೆಗಳನ್ನು ತೆರೆದರೆ ಹಾಲಿ ಬಿಸಿಯೂಟ ಯೋಜನೆಯಡಿ ಅಡುಗೆ ಮಾಡುತ್ತಿರುವವರನ್ನು, ಅಡುಗೆ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ಪ್ರತಿಭಟನೆಯಲ್ಲಿ ಫೆಡರೇಷನ್ ಅಧ್ಯಕ್ಷ ಆವರಗೆರೆ ಚಂದ್ರು, ಪ್ರಧಾನ ಕಾರ್ಯದರ್ಶಿ ಜಿ.ಜಿ.ಅಕ್ಕಮ್ಮ, ಉಪ ಪ್ರಧಾನ ಕಾರ್ಯದರ್ಶಿ ಪುಷ್ಪಾ, ಬೆಳಲಗೆರೆ ರುದ್ರಮ್ಮ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>