ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯರಾತ್ರಿಯೇ ನಿಷೇಧಾಜ್ಞೆ ಅಂತ್ಯ: ಭಾಸ್ಕರ್ ರಾವ್

Last Updated 21 ಡಿಸೆಂಬರ್ 2019, 20:22 IST
ಅಕ್ಷರ ಗಾತ್ರ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟಗಳು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ನಗರದಲ್ಲಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯು ಶನಿವಾರ ಮಧ್ಯರಾತ್ರಿ 12ಕ್ಕೆ ಅಂತ್ಯಗೊಂಡಿದೆ.

‘ಡಿ. 19ರ ಮಧ್ಯರಾತ್ರಿಯಿಂದ ಮೂರು ದಿನಗಳಿಂದ ನಗರದಲ್ಲಿದ್ದ ನಿಷೇಧಾಜ್ಞೆ ಕೊನೆಯಾಗಲಿದೆ. ಈ ಮೂರು ದಿನದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ’ ಎಂದು ನಗರ ಕಮಿಷನರ್ ಭಾಸ್ಕರ್ ರಾವ್ ಹೇಳಿದರು.

’ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಯಾರಾದರೂ ಪ್ರತಿಭಟನೆ ನಡೆಸಲು ಮುಂದಾದರೆ ಅವರಿಗೆ ಅನುಮತಿ ಕೊಡಬೇಕೋ ಅಥವಾ ಬೇಡವೋ ಎಂಬ ನಿರ್ಧಾರವನ್ನು ಆಯಾ ಡಿಸಿಪಿಗಳೇ ತೆಗೆದುಕೊಳ್ಳಲಿದ್ದಾರೆ. ಒಂದು ವೇಳೆ ಪರಿಸ್ಥಿತಿ ಕೈ ಮೀರುವ ಸಂದರ್ಭ ಬಂದರೆ ಪುನಃ ನಿಷೇಧಾಜ್ಞೆ ಜಾರಿ ಬಗ್ಗೆ ಚಿಂತನೆ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT