ಯಶವಂತಪುರದ ಎಪಿಎಂಸಿ ಹಾಗೂ ಮಾಗಡಿ ರಸ್ತೆಯ ಕಾವೇರಿಪುರ ಗುಡ್ಡದಲ್ಲಿ ಬಹುವಸತಿ ಸಮುಚ್ಛಯ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರನ್ನು ಭೇಟಿ ಮಾಡಿದ ಸಚಿವರು, ‘ನಗರದಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲಾ ಬೃಹತ್ ನಿರ್ಮಾಣ ಚಟುವಟಿಕೆಗಳು ಶೀಘ್ರ ಆರಂಭವಾಗಲಿದ್ದು, ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು. ಕಟ್ಟಡ ಕಾರ್ಮಿಕರ ಮಾಲೀಕ ರೊಂದಿಗೆ ಸ್ಥಳದಲ್ಲಿಯೇ ಮಾತನಾಡಿ, ಎಲ್ಲಾ ಕಾರ್ಮಿಕರಿಗೆ ನೀಡಬೇಕಿರುವ ಬಾಕಿಯನ್ನು ಕೂಡಲೇ ನೀಡುವಂತೆ ಸೂಚಿಸಿದರು.