ಅವರೆಲ್ಲರಿಗೂ ಅರಮನೆ ಮೈದಾನದಲ್ಲೇ ಉಳಿಯಲು ಬಿಬಿಎಂಪಿ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದರು. ಅವರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿತ್ತು. ಭಾನುವಾರ ಬೆಳಿಗ್ಗೆ ವಿಶೇಷ ರೈಲುಗಳಲ್ಲಿ ಅವರನ್ನು ಕಳುಹಿಸಿಕೊಡಲಾಯಿತು. ಇನ್ನೂ 2 ಸಾವಿರ ಕಾರ್ಮಿಕರನ್ನು ಕಳುಹಿಸಲು ಬಾಕಿ ಇದೆ. ಎಲ್ಲರಿಗೂ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದರು.