<p><strong>ದಾಬಸ್ಪೇಟೆ:</strong> ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಿರ್ಮಿಸಿರುವ ಸೋಂಪುರ ಪುಣ್ಯಕೋಟಿ ನಂದಿನಿ ಕ್ಷೀರ ಭವನವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.</p>.<p>ಬೆಂಗಳೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಸಿ. ನಾಗರಾಜಯ್ಯ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆ ನಂಬಿ ಸಾವಿರಾರು ಕುಟುಂಬಗಳು ಸ್ವಾವಲಂಬನೆಯಿಂದ ಬದುಕುತ್ತಿವೆ.ಹಾಲು ಉತ್ಪಾದಕರಿಗೆ ಒಕ್ಕೂಟದಿಂದ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ’ ಎಂದರು.</p>.<p>‘ಜಾನುವಾರುಗಳಿಗೆ ಪೌಷ್ಟಿಕ ಆಹಾರ ನೀಡಿ, ಕೊಟ್ಟಿಗೆಗಳನ್ನು ಶುಚಿಯಾಗಿಟ್ಟುಕೊಂಡು ಹಾಲು ಉತ್ಪಾದಕರು ಗುಣಮಟ್ಟ ಕಾಯ್ದುಕೊಳ್ಳಬೇಕು’ ಎಂದು ಬಮೂಲ್ ನಿರ್ದೇಶಕತಿಮ್ಮರಾಜು ಹೇಳಿದರು.</p>.<p>ಹೊನ್ನಮ್ಮಗವಿ ಮಠದ ರುದ್ರಮುನಿ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಸೋಂಪುರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮರುಳಸಿದ್ಧಯ್ಯ, ಸದಸ್ಯರು, ಹೋಬಳಿಯ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಹಾಲು ಉತ್ಪಾದಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ಪೇಟೆ:</strong> ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಿರ್ಮಿಸಿರುವ ಸೋಂಪುರ ಪುಣ್ಯಕೋಟಿ ನಂದಿನಿ ಕ್ಷೀರ ಭವನವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.</p>.<p>ಬೆಂಗಳೂರು ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಸಿ. ನಾಗರಾಜಯ್ಯ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆ ನಂಬಿ ಸಾವಿರಾರು ಕುಟುಂಬಗಳು ಸ್ವಾವಲಂಬನೆಯಿಂದ ಬದುಕುತ್ತಿವೆ.ಹಾಲು ಉತ್ಪಾದಕರಿಗೆ ಒಕ್ಕೂಟದಿಂದ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ’ ಎಂದರು.</p>.<p>‘ಜಾನುವಾರುಗಳಿಗೆ ಪೌಷ್ಟಿಕ ಆಹಾರ ನೀಡಿ, ಕೊಟ್ಟಿಗೆಗಳನ್ನು ಶುಚಿಯಾಗಿಟ್ಟುಕೊಂಡು ಹಾಲು ಉತ್ಪಾದಕರು ಗುಣಮಟ್ಟ ಕಾಯ್ದುಕೊಳ್ಳಬೇಕು’ ಎಂದು ಬಮೂಲ್ ನಿರ್ದೇಶಕತಿಮ್ಮರಾಜು ಹೇಳಿದರು.</p>.<p>ಹೊನ್ನಮ್ಮಗವಿ ಮಠದ ರುದ್ರಮುನಿ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಸೋಂಪುರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮರುಳಸಿದ್ಧಯ್ಯ, ಸದಸ್ಯರು, ಹೋಬಳಿಯ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಹಾಲು ಉತ್ಪಾದಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>