<p><strong>ಬೆಂಗಳೂರು</strong>: ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗೆದ್ದಲಹಳ್ಳಿ ರೈಲ್ವೆ ಕೆಳಸೇತುವೆ ಬಳಿ ಶುಕ್ರವಾರ ಬೆಳಿಗ್ಗೆ ಮಿನಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಹಾಗೂ ಚಾಲಕ ಗಾಯಗೊಂಡಿದ್ದಾರೆ. </p>.<p>‘ವಾಹನದ ಬ್ರೇಕ್ ವಿಫಲಗೊಂಡಿದ್ದು, ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಮಿನಿ ಬಸ್ನಲ್ಲಿ ಎಂಟಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿದ್ದರು. ಕಮ್ಮನಹಳ್ಳಿ–ಲಿಂಗರಾಜಪುರ ನಡುವೆ ಮಿನಿ ಬಸ್ ಸಂಚರಿಸುತ್ತಿತ್ತು. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ಸಂಬಂಧ ದೂರು ದಾಖಲಾಗಿಲ್ಲ.</p>.<p><strong>ಒಂದೇ ಸ್ಥಳದಲ್ಲಿ ಎರಡು ಅಪಘಾತ: </strong></p><p>ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವಿಂಡ್ಸರ್ ಮ್ಯಾನರ್ ಸೇತುವೆ ಬಳಿ ಶನಿವಾರ ಮೂರು ಗಂಟೆಯ ಅಂತರದಲ್ಲಿ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.</p>.<p>ಶನಿವಾರ ಮುಂಜಾನೆ 4 ಗಂಟೆ ಹಾಗೂ ಬೆಳಿಗ್ಗೆ 7 ಗಂಟೆ ಸುಮಾರಿಗೆ ಸೇತುವೆಗೆ ಎರಡು ಆಟೊಗಳು ಡಿಕ್ಕಿ ಹೊಡೆದಿವೆ. ಇದರಿಂದ ನಜೀರ್ ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ರಸ್ತೆ ಸರಿಯಿಲ್ಲದ ಕಾರಣಕ್ಕೆ ಅಪಘಾತಗಳು ನಡೆದಿವೆ. ಕೂಡಲೇ ರಸ್ತೆ ಸರಿಪಡಿಸಬೇಕು ಆಟೊ ಚಾಲಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗೆದ್ದಲಹಳ್ಳಿ ರೈಲ್ವೆ ಕೆಳಸೇತುವೆ ಬಳಿ ಶುಕ್ರವಾರ ಬೆಳಿಗ್ಗೆ ಮಿನಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಹಾಗೂ ಚಾಲಕ ಗಾಯಗೊಂಡಿದ್ದಾರೆ. </p>.<p>‘ವಾಹನದ ಬ್ರೇಕ್ ವಿಫಲಗೊಂಡಿದ್ದು, ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಮಿನಿ ಬಸ್ನಲ್ಲಿ ಎಂಟಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿದ್ದರು. ಕಮ್ಮನಹಳ್ಳಿ–ಲಿಂಗರಾಜಪುರ ನಡುವೆ ಮಿನಿ ಬಸ್ ಸಂಚರಿಸುತ್ತಿತ್ತು. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ಸಂಬಂಧ ದೂರು ದಾಖಲಾಗಿಲ್ಲ.</p>.<p><strong>ಒಂದೇ ಸ್ಥಳದಲ್ಲಿ ಎರಡು ಅಪಘಾತ: </strong></p><p>ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವಿಂಡ್ಸರ್ ಮ್ಯಾನರ್ ಸೇತುವೆ ಬಳಿ ಶನಿವಾರ ಮೂರು ಗಂಟೆಯ ಅಂತರದಲ್ಲಿ ಎರಡು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.</p>.<p>ಶನಿವಾರ ಮುಂಜಾನೆ 4 ಗಂಟೆ ಹಾಗೂ ಬೆಳಿಗ್ಗೆ 7 ಗಂಟೆ ಸುಮಾರಿಗೆ ಸೇತುವೆಗೆ ಎರಡು ಆಟೊಗಳು ಡಿಕ್ಕಿ ಹೊಡೆದಿವೆ. ಇದರಿಂದ ನಜೀರ್ ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ರಸ್ತೆ ಸರಿಯಿಲ್ಲದ ಕಾರಣಕ್ಕೆ ಅಪಘಾತಗಳು ನಡೆದಿವೆ. ಕೂಡಲೇ ರಸ್ತೆ ಸರಿಪಡಿಸಬೇಕು ಆಟೊ ಚಾಲಕರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>