<p>ಬೆಂಗಳೂರು: ‘ಕನ್ನಡಕ್ಕಾಗಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್ಕೆಸಿಸಿಐ) ವತಿಯಿಂದ ಒಂದು ಪ್ರಶಸ್ತಿಯನ್ನು ಸ್ಥಾಪಿಸಬೇಕು. ಇದರ ಮೂಲಕ ಕನ್ನಡ ಭಾಷೆಗೆ ಮೆರಗು ತರಬೇಕು’ ಎಂದು ಕಂದಾಯ ಸಚಿವ ಆರ್.ಅಶೋಕ ಸಲಹೆ ನೀಡಿದರು.</p>.<p>ಎಫ್ಕೆಸಿಸಿಐ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ 66 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ದಿವಂಗತ ಪುನೀತ್ ರಾಜಕುಮಾರ್ ಅವರ ಸಮಾಜಮುಖಿ ಕೆಲಸಗಳಿಂದ ಪ್ರೇರಣೆ ಪಡೆದು ಕನ್ನಡಕ್ಕಾಗಿ ಇನ್ನಷ್ಟು ಹೆಚ್ಚು ಕೆಲಸ ಮಾಡುವಂತಾಗಬೇಕು’ ಎಂದರು.</p>.<p>ಗಡಿನಾಡು ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್, ‘ಕನ್ನಡ ನಾಡು ನುಡಿಯ ಸೇವೆಗೆ ಎಲ್ಲರೂ ಮುಂದಾಗಬೇಕು. ಈ ಕೈಂಕರ್ಯ ನವೆಂಬರ್ ತಿಂಗಳಿಗೆ ಸೀಮಿತವಾಗಬಾರದು. ಪ್ರತಿ ದಿನವೂ ಮನೆ ಮನಗಳಲ್ಲಿ ಕನ್ನಡ ಭಾಷೆ ಹಾಸು ಹೊಕ್ಕಾಗಬೇಕು’ ಎಂದರು.</p>.<p>ಕೋವಿಡ್ ನಿಯಂತ್ರಣಕ್ಕಾಗಿ ಜೀವದ ಹಂಗು ತೊರೆದು ಶ್ರಮಿಸಿದ ವೈದ್ಯರು, ಶುಶ್ರೂಷಕರು ಹಾಗೂ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.</p>.<p>ವಿದ್ವಾಂಸ ಮಲ್ಲೇಪುರಂ ಜಿ.ವೆಂಕಟೇಶ್, ಉದ್ಯಮಿ ಪೆರಿಕಲ್ ಸುಂದರ್, ಎಫ್ಕೆಸಿಸಿಐ ಅಧ್ಯಕ್ಷ ಡಾ.ಐ.ಎಸ್ ಪ್ರಸಾದ್, ಹಿರಿಯ ಉಪಾಧ್ಯಕ್ಷ ಜಿ.ವಿ.ಗೋಪಾಲ ರೆಡ್ಡಿ, ಉಪಾಧ್ಯಕ್ಷ ರಮೇಶಚಂದ್ರ ಲಹೋಟಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಕನ್ನಡಕ್ಕಾಗಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್ಕೆಸಿಸಿಐ) ವತಿಯಿಂದ ಒಂದು ಪ್ರಶಸ್ತಿಯನ್ನು ಸ್ಥಾಪಿಸಬೇಕು. ಇದರ ಮೂಲಕ ಕನ್ನಡ ಭಾಷೆಗೆ ಮೆರಗು ತರಬೇಕು’ ಎಂದು ಕಂದಾಯ ಸಚಿವ ಆರ್.ಅಶೋಕ ಸಲಹೆ ನೀಡಿದರು.</p>.<p>ಎಫ್ಕೆಸಿಸಿಐ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ 66 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ದಿವಂಗತ ಪುನೀತ್ ರಾಜಕುಮಾರ್ ಅವರ ಸಮಾಜಮುಖಿ ಕೆಲಸಗಳಿಂದ ಪ್ರೇರಣೆ ಪಡೆದು ಕನ್ನಡಕ್ಕಾಗಿ ಇನ್ನಷ್ಟು ಹೆಚ್ಚು ಕೆಲಸ ಮಾಡುವಂತಾಗಬೇಕು’ ಎಂದರು.</p>.<p>ಗಡಿನಾಡು ಪ್ರಾಧಿಕಾರದ ಅಧ್ಯಕ್ಷ ಸಿ.ಸೋಮಶೇಖರ್, ‘ಕನ್ನಡ ನಾಡು ನುಡಿಯ ಸೇವೆಗೆ ಎಲ್ಲರೂ ಮುಂದಾಗಬೇಕು. ಈ ಕೈಂಕರ್ಯ ನವೆಂಬರ್ ತಿಂಗಳಿಗೆ ಸೀಮಿತವಾಗಬಾರದು. ಪ್ರತಿ ದಿನವೂ ಮನೆ ಮನಗಳಲ್ಲಿ ಕನ್ನಡ ಭಾಷೆ ಹಾಸು ಹೊಕ್ಕಾಗಬೇಕು’ ಎಂದರು.</p>.<p>ಕೋವಿಡ್ ನಿಯಂತ್ರಣಕ್ಕಾಗಿ ಜೀವದ ಹಂಗು ತೊರೆದು ಶ್ರಮಿಸಿದ ವೈದ್ಯರು, ಶುಶ್ರೂಷಕರು ಹಾಗೂ ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.</p>.<p>ವಿದ್ವಾಂಸ ಮಲ್ಲೇಪುರಂ ಜಿ.ವೆಂಕಟೇಶ್, ಉದ್ಯಮಿ ಪೆರಿಕಲ್ ಸುಂದರ್, ಎಫ್ಕೆಸಿಸಿಐ ಅಧ್ಯಕ್ಷ ಡಾ.ಐ.ಎಸ್ ಪ್ರಸಾದ್, ಹಿರಿಯ ಉಪಾಧ್ಯಕ್ಷ ಜಿ.ವಿ.ಗೋಪಾಲ ರೆಡ್ಡಿ, ಉಪಾಧ್ಯಕ್ಷ ರಮೇಶಚಂದ್ರ ಲಹೋಟಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>