ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ಬಳಿಕ ಅವರು ಮಾತನಾಡಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು ಮದರಸಾಗಳ ಪರಿಶೀಲನೆಗೆ ತೆರಳಿದ್ದಾಗ ಕೆಲ ಆಡಳಿತ ಮಂಡಳಿಗಳು ಸಹಕರಿಸಿಲ್ಲ ಎಂಬ ದೂರುಗಳು ಇಲಾಖೆಗೆ ಬಂದಿವೆ. ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣ ಪಡೆದ ಬಳಿಕ ವಿಜ್ಞಾನ, ಗಣಿತ ಅಧ್ಯಯನ ಮಾಡಲು ಹತ್ತಿರದ ಶಾಲೆಗಳಿಗೆ ಹಾಜರಾಗಬೇಕು ಎಂಬ ನಿಯಮವಿದೆ. ಮದರಸಾಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಸಿಗಬೇಕಾಗ ಶಿಕ್ಷಣ ಸಿಗುತ್ತಿದೆಯೇ? ಯಾವ ರೀತಿಯ ಶಿಕ್ಷಣ ನೀಡಲಾಗುತ್ತಿದೆಯೇ? ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣದ ಸ್ವರೂಪ ಹೇಗಿದೆ ಎನ್ನುವ ಕುರಿತು ಮಾಹಿತಿಯ ಅಗತ್ಯವಿದೆ. ಅಧಿಕಾರಿಗಳ ವರದಿಯ ನಂತರ ಶಿಕ್ಷಣ ತಜ್ಞರು, ಮದರಸಾ ಮುಖ್ಯಸ್ಥರ ಜತೆ ಸಭೆ ನಡೆಸಲಾಗುವುದು ಎಂದರು.