ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛತಾ ಕಿಟ್‌ ವಿತರಣೆಗೆ ಸಚಿವ ಸುಧಾಕರ್ ಚಾಲನೆ

Last Updated 19 ಫೆಬ್ರುವರಿ 2021, 2:55 IST
ಅಕ್ಷರ ಗಾತ್ರ

ಬೆಂಗಳೂರು: ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು ಒರಾಕಲ್‌ ಕಂಪನಿಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ 36,000 ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಹಾಗೂ ಸ್ವಚ್ಛತಾ ಕಿಟ್‌ ವಿತರಿಸುವ ಅಭಿಯಾನಕ್ಕೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಗುರುವಾರ ಚಾಲನೆ ನೀಡಿದರು.

ಕೈಗವಸು, ಮಾಸ್ಕ್‌, ಸ್ಯಾನಿಟೈಸರ್‌, ಸೋಪು, ಸ್ಯಾನಿಟರಿ ನ್ಯಾಪ್‌ಕಿನ್‌ ಸೇರಿದಂತೆ ಸ್ವಚ್ಛತೆಗೆ ಸಂಬಂಧಿಸಿದ ಹಲವು ಪರಿಕರಗಳನ್ನು ಕಿಟ್‌ನಲ್ಲಿ ನೀಡಲಾಗಿದೆ. ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರಿಗೂ ಈ ಕಿಟ್‌ ವಿತರಿಸಲಾಗುತ್ತದೆ. ಒರಾಕಲ್‌ ಕಂಪನಿಯ ಸಾಮಾಜಿಕ ಹೊಣೆಗಾರಿಕೆ ನಿಧಿಯ ನೆರವಿನಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT