‘ಮುಂದೆ ಮೊಹರಂ, ಗಣೇಶ ಚತುರ್ಥಿ, ರಾಘವೇಂದ್ರ ಆರಾಧನೆ ಸೇರಿದಂತೆ ಐದಕ್ಕೂ ಹೆಚ್ಚು ಹಬ್ಬ ಅಥವಾ ಉತ್ಸವಗಳು ಇವೆ. ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ‘ ಎಂದೂ ಹೇಳಿದರು.