’ವ್ಯಾಟ್ ವ್ಯವಸ್ಥೆಯಲ್ಲಿ ಕೇವಲ 5.8 ಲಕ್ಷ ತೆರಿಗೆ ಪಾವತಿದಾರರಿದ್ದರು. ಈಗ ಜಿಎಸ್ಟಿ ವ್ಯಾಪ್ತಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಅಡಿಕೆ, ಗುಜರಿ, ಸಿಮೆಂಟ್, ಕ್ರಷರ್ಗಳಿಂದ ವ್ಯಾಪಕ ತೆರಿಗೆ ವಂಚನೆಯಾಗುತ್ತಿರುವ ಬಗ್ಗೆ ದೂರುಗಳಿವೆ. ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಆರ್ಥಿಕ ಶಿಸ್ತು ಮತ್ತು ಸಂಪನ್ಮೂಲ ಕ್ರೋಡಿಕರಣಕ್ಕೆ ಒತ್ತು ನೀಡಲು ಹಾಗೂ ತೆರಿಗೆ ವಸೂಲಾತಿಯಲ್ಲಿ ಸುಧಾರಣೆಗಳನ್ನು ತರಲು ಸರ್ಕಾರ ದೃಢ ಹೆಜ್ಜೆಗಳನ್ನು ಇಟ್ಟಿದೆ’ ಎಂದು ತಿಳಿಸಿದರು.