ವಿಧಾನ ಪರಿಷತ್ನಲ್ಲಿ ಸೋಮವಾರ ಬಿಜೆಪಿಯ ಭಾರತಿ ಶೆಟ್ಟಿ ಮತ್ತು ಲೆಹರ್ ಸಿಂಗ್ ಸಿರೋಯಾ ಅವರು ನಿಯಮ 72ರಡಿ ಮಂಡಿಸಿದ ಸೂಚನೆಗೆ ಉತ್ತರಿಸಿದ ಸಚಿವರು, ‘ಕಾಯ್ದೆ ತಿದ್ದುಪಡಿಗೆ ಪೂರಕವಾಗಿ ಕರಡನ್ನು ರೂಪಿಸುವಂತೆ ರಾಷ್ಟ್ರೀಯ ಕಾನೂನು ಶಾಲೆ (ಎನ್ಎಲ್ಎಸ್ಐಯು) ಕಾನೂನು ತಜ್ಞರು ಮತ್ತು ಅಡ್ವೊಕೇಟ್ ಜನರಲ್ ಅವರನ್ನು ಕೋರಲಾಗಿದೆ. ಕರಡು ವರದಿ ದೊರೆತ ಬಳಿಕ ಕಾನೂನು ತಿದ್ದುಪಡಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.