<p><strong>ಪೀಣ್ಯ ದಾಸರಹಳ್ಳಿ:</strong> 'ದಾಸರಹಳ್ಳಿ ವಲಯದ ಯಾವ ವಾರ್ಡ್ನಲ್ಲೂ ಕೊರೊನಾ ಪಾಸಿಟಿವ್ ಬಂದ ರೋಗಿಗಳನ್ನು ಕಾಯಿಸಬಾರದು. ಅವರನ್ನು ಕೂಡಲೇ ಆಸ್ಪತ್ರೆಗಳಿಗೆ ದಾಖಲು ಮಾಡಬೇಕು. ಒಂದು ವೇಳೆ ದೂರು ಬಂದರೆ ವಾರ್ಡ್ಮಟ್ಟದ ಪಾಲಿಕೆ ಸದಸ್ಯರು ಹಾಗೂ ಎಂಜಿನಿಯರ್ಗಳೇ ಹೊಣೆಗಾರರು' ಎಂದು ಆಹಾರ ಸಚಿವ ಕೆ.ಗೋಪಾಲಯ್ಯ ಎಚ್ಚರಿಸಿದರು.</p>.<p>ಕೊರೊನಾ ನಿಯಂತ್ರಣಕ್ಕಾಗಿ ದಾಸರಹಳ್ಳಿ ವಲಯದ ಜನಪ್ರತಿನಿಧಿಗಳು, ಪಾಲಿಕೆ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದರು.</p>.<p>'ಲಾಕ್ಡೌನ್ ಸಡಿಲಿಕೆಯಾದ ಬಳಿಕ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ವಾರ್ಡ್ಗಳಿಂದ ಬರುವ ದೂರುಗಳಿಗೆ ತಕ್ಷಣವೇ ಅಧಿಕಾರಿಗಳು ಸ್ಪಂದಿಸಬೇಕು. ಸೋಂಕಿನ ದೂರುಗಳು ಬಂದ ಸ್ಥಳಗಳಿಗೂ ಸೇರಿ ಪ್ರತಿ ವಾರ್ಡ್ನ ಬೀದಿಗಳು, ರಸ್ತೆ ಹಾಗೂ ಮನೆಗಳಿಗೆ ಸೋಮವಾರದೊಳಗೆ ಸ್ಯಾನಿಟೈಸ್ ಕಡ್ಡಾಯವಾಗಿ ಮಾಡಬೇಕು' ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>’ಕೋವಿಡ್ ಪರೀಕ್ಷಾ ವರದಿಗಳು ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತಂದು ಶೀಘ್ರದಲ್ಲಿ ಬಗೆಹರಿಸಲಾಗುವುದು‘ ಎಂದು ಅವರು ಹೇಳಿದರು.</p>.<p><strong>ಅಧಿಕಾರಿಗಳ ನಿರ್ಲಕ್ಷ್ಯ– ಶಾಸಕ ಕಿಡಿ:</strong> ಶಾಸಕ ಆರ್.ಮಂಜುನಾಥ್, ’ಲಾಕ್ಡೌನ್ ಇದ್ದಾಗ ಕ್ಷೇತ್ರದಲ್ಲಿ ಒಂದೇ ಒಂದು ಪ್ರಕರಣ ಇರಲಿಲ್ಲ. ಈಗ ಪ್ರಕರಣಗಳ ಸಂಖ್ಯೆ 116ಕ್ಕೆ ಏರಿದೆ. ಜಂಟಿ ಆಯುಕ್ತ ನರಸಿಂಹಮೂರ್ತಿ ನಿರ್ಲಕ್ಷ್ಯವೇ ಇದಕ್ಕೆ ಕಾರಣ‘ ಎಂದು ಆರೋಪಿಸಿದರು.</p>.<p>’ಕೊರೊನಾ ಸೋಂಕು ನಿಯಂತ್ರಣಕ್ಕಿಂತ ಅವರಿಗೆ ಬೇರೆ ವಿಷಯಗಳಲ್ಲೇ ಹೆಚ್ಚು ಆಸಕ್ತಿ. ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಒಂದೇ ಒಂದು ಸಭೆ ನಡೆಸಿಲ್ಲ‘ ಎಂದು ಕಿಡಿಕಾರಿದರು.</p>.<p>’ಕ್ಷೇತ್ರದಲ್ಲಿ ಅಧಿಕಾರಿಗಳು ಸಬೂಬು ಹೇಳುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಸೋಂಕಿತರ ಮನೆಯವರಿಗೆ ಅಗತ್ಯ ಸೇವೆಗಳನ್ನು ಒದಗಿಸುತ್ತಿಲ್ಲ. ಅನಿವಾರ್ಯವಾಗಿ ಅವರು ಮನೆಯಿಂದ ಹೊರಬರಬೇಕಾದ ಸ್ಥಿತಿ ಇದೆ. ಸರಿಯಾಗಿ ಸೀಲ್ಡೌನ್ ಮಾಡುತ್ತಿಲ್ಲ‘ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> 'ದಾಸರಹಳ್ಳಿ ವಲಯದ ಯಾವ ವಾರ್ಡ್ನಲ್ಲೂ ಕೊರೊನಾ ಪಾಸಿಟಿವ್ ಬಂದ ರೋಗಿಗಳನ್ನು ಕಾಯಿಸಬಾರದು. ಅವರನ್ನು ಕೂಡಲೇ ಆಸ್ಪತ್ರೆಗಳಿಗೆ ದಾಖಲು ಮಾಡಬೇಕು. ಒಂದು ವೇಳೆ ದೂರು ಬಂದರೆ ವಾರ್ಡ್ಮಟ್ಟದ ಪಾಲಿಕೆ ಸದಸ್ಯರು ಹಾಗೂ ಎಂಜಿನಿಯರ್ಗಳೇ ಹೊಣೆಗಾರರು' ಎಂದು ಆಹಾರ ಸಚಿವ ಕೆ.ಗೋಪಾಲಯ್ಯ ಎಚ್ಚರಿಸಿದರು.</p>.<p>ಕೊರೊನಾ ನಿಯಂತ್ರಣಕ್ಕಾಗಿ ದಾಸರಹಳ್ಳಿ ವಲಯದ ಜನಪ್ರತಿನಿಧಿಗಳು, ಪಾಲಿಕೆ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದರು.</p>.<p>'ಲಾಕ್ಡೌನ್ ಸಡಿಲಿಕೆಯಾದ ಬಳಿಕ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ವಾರ್ಡ್ಗಳಿಂದ ಬರುವ ದೂರುಗಳಿಗೆ ತಕ್ಷಣವೇ ಅಧಿಕಾರಿಗಳು ಸ್ಪಂದಿಸಬೇಕು. ಸೋಂಕಿನ ದೂರುಗಳು ಬಂದ ಸ್ಥಳಗಳಿಗೂ ಸೇರಿ ಪ್ರತಿ ವಾರ್ಡ್ನ ಬೀದಿಗಳು, ರಸ್ತೆ ಹಾಗೂ ಮನೆಗಳಿಗೆ ಸೋಮವಾರದೊಳಗೆ ಸ್ಯಾನಿಟೈಸ್ ಕಡ್ಡಾಯವಾಗಿ ಮಾಡಬೇಕು' ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>’ಕೋವಿಡ್ ಪರೀಕ್ಷಾ ವರದಿಗಳು ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತಂದು ಶೀಘ್ರದಲ್ಲಿ ಬಗೆಹರಿಸಲಾಗುವುದು‘ ಎಂದು ಅವರು ಹೇಳಿದರು.</p>.<p><strong>ಅಧಿಕಾರಿಗಳ ನಿರ್ಲಕ್ಷ್ಯ– ಶಾಸಕ ಕಿಡಿ:</strong> ಶಾಸಕ ಆರ್.ಮಂಜುನಾಥ್, ’ಲಾಕ್ಡೌನ್ ಇದ್ದಾಗ ಕ್ಷೇತ್ರದಲ್ಲಿ ಒಂದೇ ಒಂದು ಪ್ರಕರಣ ಇರಲಿಲ್ಲ. ಈಗ ಪ್ರಕರಣಗಳ ಸಂಖ್ಯೆ 116ಕ್ಕೆ ಏರಿದೆ. ಜಂಟಿ ಆಯುಕ್ತ ನರಸಿಂಹಮೂರ್ತಿ ನಿರ್ಲಕ್ಷ್ಯವೇ ಇದಕ್ಕೆ ಕಾರಣ‘ ಎಂದು ಆರೋಪಿಸಿದರು.</p>.<p>’ಕೊರೊನಾ ಸೋಂಕು ನಿಯಂತ್ರಣಕ್ಕಿಂತ ಅವರಿಗೆ ಬೇರೆ ವಿಷಯಗಳಲ್ಲೇ ಹೆಚ್ಚು ಆಸಕ್ತಿ. ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಒಂದೇ ಒಂದು ಸಭೆ ನಡೆಸಿಲ್ಲ‘ ಎಂದು ಕಿಡಿಕಾರಿದರು.</p>.<p>’ಕ್ಷೇತ್ರದಲ್ಲಿ ಅಧಿಕಾರಿಗಳು ಸಬೂಬು ಹೇಳುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಸೋಂಕಿತರ ಮನೆಯವರಿಗೆ ಅಗತ್ಯ ಸೇವೆಗಳನ್ನು ಒದಗಿಸುತ್ತಿಲ್ಲ. ಅನಿವಾರ್ಯವಾಗಿ ಅವರು ಮನೆಯಿಂದ ಹೊರಬರಬೇಕಾದ ಸ್ಥಿತಿ ಇದೆ. ಸರಿಯಾಗಿ ಸೀಲ್ಡೌನ್ ಮಾಡುತ್ತಿಲ್ಲ‘ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>