<p><strong>ಬೆಂಗಳೂರು:</strong> ನಗರದ ಕೆಂಪೇಗೌಡ ವೈದ್ಯಕೀಯ ವಿಜ್ಞಾನ (ಕಿಮ್ಸ್) ಸಂಸ್ಥೆಯ ವೈದ್ಯರಿಗೆ ಕಳಪೆ ಗುಣಮಟ್ಟದ ವೈಯಕ್ತಿಕ ಸುರಕ್ಷತಾ ಸಾಧನ (ಪಿಪಿಇ) ಮತ್ತು ಎನ್ 95 ಮಾಸ್ಕ್ ವಿತರಿಸಿರುವ ಆರೋಪದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.</p>.<p>ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ‘ಈಗಾಗಲೇ ತನಿಖೆಗೆ ಆದೇಶಿಸಿದ್ದೇನೆ’ ಎಂದಿದ್ದಾರೆ.</p>.<p>‘ಆರೋಪ ಸಾಬೀತಾದರೆ ಅದಕ್ಕೆ ಆಡಳಿತ ಮಂಡಳಿಯೇ ಹೊಣೆಯಾಗಬೇಕಾಗುತ್ತದೆ’ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.</p>.<p>‘ಕೋವಿಡ್ ವಿರುದ್ಧ ನಮ್ಮ ವೈದ್ಯರು ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ಯೋಧರು. ಅವರ ಸುರಕ್ಷತೆಗೆ ಎಲ್ಲ ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ’ ಎಂದು ಸುಧಾಕರ್ ಹೇಳಿದ್ದಾರೆ.</p>.<p>‘ನಮ್ಮ ಸುರಕ್ಷತೆಯ ಜೊತೆಗೆ ಇನ್ನೊಬ್ಬರ ಸುರಕ್ಷತೆಗೆ ಅಪಾಯ ಬೇಡ ಎನ್ನುವ ಎಚ್ಚರ ಎಲ್ಲರಲ್ಲೂ ಮೂಡಲಿ. ಬಳಸಿ ತ್ಯಜಿಸುವ ಮಾಸ್ಕ್ಗಳನ್ನು ಕಾಗದದಲ್ಲಿ ಸುತ್ತಿ ಕೆಂಪು ಶಾಯಿಯಲ್ಲಿ ಗುರುತು ಹಾಕಿ ತ್ಯಾಜ್ಯ ಸಂಗ್ರಹಿಸುವವರಿಗೆ ನೀಡೋಣ. ಜವಾಬ್ದಾರಿಯುತ ನಾಗರಿಕರಾಗೋಣ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಕೆಂಪೇಗೌಡ ವೈದ್ಯಕೀಯ ವಿಜ್ಞಾನ (ಕಿಮ್ಸ್) ಸಂಸ್ಥೆಯ ವೈದ್ಯರಿಗೆ ಕಳಪೆ ಗುಣಮಟ್ಟದ ವೈಯಕ್ತಿಕ ಸುರಕ್ಷತಾ ಸಾಧನ (ಪಿಪಿಇ) ಮತ್ತು ಎನ್ 95 ಮಾಸ್ಕ್ ವಿತರಿಸಿರುವ ಆರೋಪದ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.</p>.<p>ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ‘ಈಗಾಗಲೇ ತನಿಖೆಗೆ ಆದೇಶಿಸಿದ್ದೇನೆ’ ಎಂದಿದ್ದಾರೆ.</p>.<p>‘ಆರೋಪ ಸಾಬೀತಾದರೆ ಅದಕ್ಕೆ ಆಡಳಿತ ಮಂಡಳಿಯೇ ಹೊಣೆಯಾಗಬೇಕಾಗುತ್ತದೆ’ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.</p>.<p>‘ಕೋವಿಡ್ ವಿರುದ್ಧ ನಮ್ಮ ವೈದ್ಯರು ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿರುವ ಯೋಧರು. ಅವರ ಸುರಕ್ಷತೆಗೆ ಎಲ್ಲ ಅಗತ್ಯ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದೆ’ ಎಂದು ಸುಧಾಕರ್ ಹೇಳಿದ್ದಾರೆ.</p>.<p>‘ನಮ್ಮ ಸುರಕ್ಷತೆಯ ಜೊತೆಗೆ ಇನ್ನೊಬ್ಬರ ಸುರಕ್ಷತೆಗೆ ಅಪಾಯ ಬೇಡ ಎನ್ನುವ ಎಚ್ಚರ ಎಲ್ಲರಲ್ಲೂ ಮೂಡಲಿ. ಬಳಸಿ ತ್ಯಜಿಸುವ ಮಾಸ್ಕ್ಗಳನ್ನು ಕಾಗದದಲ್ಲಿ ಸುತ್ತಿ ಕೆಂಪು ಶಾಯಿಯಲ್ಲಿ ಗುರುತು ಹಾಕಿ ತ್ಯಾಜ್ಯ ಸಂಗ್ರಹಿಸುವವರಿಗೆ ನೀಡೋಣ. ಜವಾಬ್ದಾರಿಯುತ ನಾಗರಿಕರಾಗೋಣ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>