<p><strong>ಬೆಂಗಳೂರು:</strong> ಸೊರಬ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಓದಿ ಎಸ್ಎಸ್ಎಲ್ಸಿಯಲ್ಲಿ ಶೇ 95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುವ 60 ವಿದ್ಯಾರ್ಥಿಗಳು ಹಾಗೂ ಅವರ ತಂದೆ– ತಾಯಿಯನ್ನು ಸೋಮವಾರ ಇಲ್ಲಿ ಸನ್ಮಾನಿಸಲಾಗುತ್ತದೆ.</p>.<p>ಸೊರಬ ಕ್ಷೇತ್ರದ ಶಾಸಕರೂ ಆದ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಸೊರಬ ಪುರಸಭೆ ಮತ್ತು ಆನವಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 40 ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುತ್ತದೆ.</p>.<p>ನಗರದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೇಂದ್ರ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸೋಮವಾರ ಸಂಜೆ 5.50ಕ್ಕೆ ಕಾರ್ಯಕ್ರಮ ನಡೆಯಲಿದೆ. ಒಟ್ಟು ಮೂರು ತಂಡಗಳಲ್ಲಿ ವಿಮಾನ ಮತ್ತು ರೈಲಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ 160 ಮಂದಿ ಬರಲಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು, ಪೋಷಕರು, ಪೌರಕಾರ್ಮಿಕರು ಸೇರಿದ್ದಾರೆ.</p>.<p>ಸನ್ಮಾನದ ಬಳಿಕ ಇವರೆಲ್ಲ ಸೋಮವಾರ ಬೆಂಗಳೂರಿನಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಮಂಗಳವಾರ ಬೆಳಿಗ್ಗೆಯಿಂದ ಸಂಜೆವರೆಗೆ ಪ್ರಮುಖ ಸ್ಥಳಗಳಾದ ವಿಧಾನ ಸೌಧ, ಸರ್ಕಾರಿ ಮತ್ಸ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಸ್ತುಸಂಗ್ರಹಾಲಯ, ನೆಹರೂ ತಾರಾಲಯ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸೊರಬ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಓದಿ ಎಸ್ಎಸ್ಎಲ್ಸಿಯಲ್ಲಿ ಶೇ 95ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರುವ 60 ವಿದ್ಯಾರ್ಥಿಗಳು ಹಾಗೂ ಅವರ ತಂದೆ– ತಾಯಿಯನ್ನು ಸೋಮವಾರ ಇಲ್ಲಿ ಸನ್ಮಾನಿಸಲಾಗುತ್ತದೆ.</p>.<p>ಸೊರಬ ಕ್ಷೇತ್ರದ ಶಾಸಕರೂ ಆದ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಸೊರಬ ಪುರಸಭೆ ಮತ್ತು ಆನವಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 40 ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುತ್ತದೆ.</p>.<p>ನಗರದ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೇಂದ್ರ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸೋಮವಾರ ಸಂಜೆ 5.50ಕ್ಕೆ ಕಾರ್ಯಕ್ರಮ ನಡೆಯಲಿದೆ. ಒಟ್ಟು ಮೂರು ತಂಡಗಳಲ್ಲಿ ವಿಮಾನ ಮತ್ತು ರೈಲಿನಲ್ಲಿ ಶಿವಮೊಗ್ಗದಿಂದ ಬೆಂಗಳೂರಿಗೆ 160 ಮಂದಿ ಬರಲಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು, ಪೋಷಕರು, ಪೌರಕಾರ್ಮಿಕರು ಸೇರಿದ್ದಾರೆ.</p>.<p>ಸನ್ಮಾನದ ಬಳಿಕ ಇವರೆಲ್ಲ ಸೋಮವಾರ ಬೆಂಗಳೂರಿನಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಮಂಗಳವಾರ ಬೆಳಿಗ್ಗೆಯಿಂದ ಸಂಜೆವರೆಗೆ ಪ್ರಮುಖ ಸ್ಥಳಗಳಾದ ವಿಧಾನ ಸೌಧ, ಸರ್ಕಾರಿ ಮತ್ಸ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ವಸ್ತುಸಂಗ್ರಹಾಲಯ, ನೆಹರೂ ತಾರಾಲಯ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>