<p>ಪ್ರಜಾವಾಣಿ ವಾರ್ತೆ</p>.<p>ಬೆಂಗಳೂರು: ‘ಅಂತರರಾಷ್ಟ್ರೀಯ ಗುಣಮಟ್ಟದ ಸೌಕರ್ಯಗಳನ್ನು ಹೊಂದಿರುವ ನಗರದ ಸಿಎಂಆರ್ ವಿಶ್ವವಿದ್ಯಾಲಯವು ಕೌಶಲ ಆಧರಿತ ಶಿಕ್ಷಣ ನೀಡಲು ಒತ್ತು ನೀಡುತ್ತಿದ್ದು, ರಾಜ್ಯದಲ್ಲಿ ಮಾದರಿ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.</p>.<p>ಬಾಗಲೂರಿನಲ್ಲಿರುವ ಲೇಕ್ ಸೈಡ್ ಕ್ಯಾಂಪಸ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಿಎಂಆರ್ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಕರ್ನಾಟಕದಲ್ಲಿ ಸಿಎಂಆರ್ ಸೇರಿ 29 ಖಾಸಗಿ ವಿಶ್ವವಿದ್ಯಾಲಯಗಳಿವೆ. ಸಿಎಂಆರ್ ವಿಶ್ವವಿದ್ಯಾಲಯದಲ್ಲಿ 6 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇಲ್ಲಿ ವಿದ್ಯಾರ್ಥಿಗಳಿಗೆ ಈಗಿನ ಬೇಡಿಕೆಗಳಿಗೆ ಅಗತ್ಯವಾದ ಪಠ್ಯಕ್ರಮದೊಂದಿಗೆ ಶಿಕ್ಷಣ ನೀಡಲಾಗುತ್ತಿದೆ. ಸ್ಪರ್ಧಾತ್ಮಕ ಜಗತ್ತಿಗೆ ಬೇಕಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಘಟಿಕೋತ್ಸವ ಭಾಷಣ ಮಾಡಿದ ಅರವಿಂದ್ ಕನ್ಸಲ್ಟೆನ್ಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ್ ಕೇಸ್ಕರ್, ‘ಭಾರತದ ಶಿಕ್ಷಣ ಹಾಗೂ ಉದ್ಯೋಗ ವಲಯದ ಬೆಳವಣಿಗೆಯು ಕೌಶಲಪೂರ್ಣ ಮತ್ತು ನೈತಿಕ ವೃತ್ತಿಪರರ ಮೇಲೆ ಅವಲಂಬಿತವಾಗಿದೆ. ನಮ್ಮ ಶಿಕ್ಷಣ ಸಂಸ್ಥೆಗಳು ಪ್ರತಿಭಾ ಪೂರೈಕೆದಾರರಾಗಿ ಉಳಿಯುವ ಬದಲು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವವರನ್ನು ರೂಪಿಸಬೇಕಿದೆ’ ಎಂದು ಸಲಹೆ ನೀಡಿದರು.</p>.<p>‘ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಸಮಗ್ರ, ಕಠಿಣ ಪರಿಶ್ರಮ ಹಾಗೂ ಬಲವಾದ ಮೌಲ್ಯಗಳು ಅತ್ಯಂತ ಮುಖ್ಯ. ಉದಯೋನ್ಮುಖ ತಂತ್ರಜ್ಞಾನಗಳನ್ನು ಜನರ ಬದುಕಿನ ಸುಧಾರಣೆಗೆ ಬಳಸುವ ಮೂಲಕ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸಿಎಂಆರ್ ವಿಶ್ವವಿದ್ಯಾಲಯದ ಅಧ್ಯಕ್ಷ ಕೆ.ಸಿ.ರಾಮಮೂರ್ತಿ ಮಾತನಾಡಿ, ‘ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾದ ಕಲಿಕಾ ಸೌಲಭ್ಯಗಳನ್ನು ನಾವು ನೀಡುತ್ತಿದ್ದೇವೆ. ಇದರ ಸದುಪಯೋಗ ಪಡೆದುಕೊಂಡ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗವಕಾಶ ಪಡೆದು ಸಾಧನೆ ಮಾಡಿದ್ದಾರೆ’ ಎಂದು ಹೇಳಿದರು.</p>.<p>ವಿಶ್ವವಿದ್ಯಾಲಯ ಕುಲಾಧಿಪತಿ ಸಬಿತಾ ರಾಮಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಉಪಕುಲಪತಿ ಎಚ್.ಬಿ.ರಾಘವೇಂದ್ರ ವಾರ್ಷಿಕ ವರದಿ ಮಂಡಿಸಿದರು. ಸಿಎಂಆರ್ ಜ್ಞಾನಧಾರ ಟ್ರಸ್ಟ್ನ ಕಾರ್ಯದರ್ಶಿ ಕೆ.ಸಿ. ಜಗನ್ನಾಥ ರೆಡ್ಡಿ, ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಜಯದೀಪ್ ಕೆ.ಆರ್.ರೆಡ್ಡಿ, ಸಹ ಕುಲಪತಿ ಆರ್.ಪ್ರವೀಣ್, ಕುಲಸಚಿವ ಮೋಹನ್ ಬಾಬು, ಕುಲಸಚಿವ(ಮೌಲ್ಯಮಾಪನ) ಅಶ್ವಿನ್ ಕುಮಾರ್ ಉಪಸ್ಥಿತರಿದ್ದರು.</p>.<p>2024–25ನೇ ಸಾಲಿನಲ್ಲಿ ಶಿಕ್ಷಣ ಪೂರೈಸಿದ 2,350 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 33 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 37 ಪಿಎಚ್.ಡಿ ಸಾಧಕರಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಬೆಂಗಳೂರು: ‘ಅಂತರರಾಷ್ಟ್ರೀಯ ಗುಣಮಟ್ಟದ ಸೌಕರ್ಯಗಳನ್ನು ಹೊಂದಿರುವ ನಗರದ ಸಿಎಂಆರ್ ವಿಶ್ವವಿದ್ಯಾಲಯವು ಕೌಶಲ ಆಧರಿತ ಶಿಕ್ಷಣ ನೀಡಲು ಒತ್ತು ನೀಡುತ್ತಿದ್ದು, ರಾಜ್ಯದಲ್ಲಿ ಮಾದರಿ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.</p>.<p>ಬಾಗಲೂರಿನಲ್ಲಿರುವ ಲೇಕ್ ಸೈಡ್ ಕ್ಯಾಂಪಸ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಿಎಂಆರ್ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಕರ್ನಾಟಕದಲ್ಲಿ ಸಿಎಂಆರ್ ಸೇರಿ 29 ಖಾಸಗಿ ವಿಶ್ವವಿದ್ಯಾಲಯಗಳಿವೆ. ಸಿಎಂಆರ್ ವಿಶ್ವವಿದ್ಯಾಲಯದಲ್ಲಿ 6 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇಲ್ಲಿ ವಿದ್ಯಾರ್ಥಿಗಳಿಗೆ ಈಗಿನ ಬೇಡಿಕೆಗಳಿಗೆ ಅಗತ್ಯವಾದ ಪಠ್ಯಕ್ರಮದೊಂದಿಗೆ ಶಿಕ್ಷಣ ನೀಡಲಾಗುತ್ತಿದೆ. ಸ್ಪರ್ಧಾತ್ಮಕ ಜಗತ್ತಿಗೆ ಬೇಕಾದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸಲಾಗುತ್ತಿದೆ’ ಎಂದು ಹೇಳಿದರು.</p>.<p>ಘಟಿಕೋತ್ಸವ ಭಾಷಣ ಮಾಡಿದ ಅರವಿಂದ್ ಕನ್ಸಲ್ಟೆನ್ಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ್ ಕೇಸ್ಕರ್, ‘ಭಾರತದ ಶಿಕ್ಷಣ ಹಾಗೂ ಉದ್ಯೋಗ ವಲಯದ ಬೆಳವಣಿಗೆಯು ಕೌಶಲಪೂರ್ಣ ಮತ್ತು ನೈತಿಕ ವೃತ್ತಿಪರರ ಮೇಲೆ ಅವಲಂಬಿತವಾಗಿದೆ. ನಮ್ಮ ಶಿಕ್ಷಣ ಸಂಸ್ಥೆಗಳು ಪ್ರತಿಭಾ ಪೂರೈಕೆದಾರರಾಗಿ ಉಳಿಯುವ ಬದಲು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವವರನ್ನು ರೂಪಿಸಬೇಕಿದೆ’ ಎಂದು ಸಲಹೆ ನೀಡಿದರು.</p>.<p>‘ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಸಮಗ್ರ, ಕಠಿಣ ಪರಿಶ್ರಮ ಹಾಗೂ ಬಲವಾದ ಮೌಲ್ಯಗಳು ಅತ್ಯಂತ ಮುಖ್ಯ. ಉದಯೋನ್ಮುಖ ತಂತ್ರಜ್ಞಾನಗಳನ್ನು ಜನರ ಬದುಕಿನ ಸುಧಾರಣೆಗೆ ಬಳಸುವ ಮೂಲಕ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಸಿಎಂಆರ್ ವಿಶ್ವವಿದ್ಯಾಲಯದ ಅಧ್ಯಕ್ಷ ಕೆ.ಸಿ.ರಾಮಮೂರ್ತಿ ಮಾತನಾಡಿ, ‘ಸ್ಪರ್ಧಾತ್ಮಕ ಜಗತ್ತಿಗೆ ಪೂರಕವಾದ ಕಲಿಕಾ ಸೌಲಭ್ಯಗಳನ್ನು ನಾವು ನೀಡುತ್ತಿದ್ದೇವೆ. ಇದರ ಸದುಪಯೋಗ ಪಡೆದುಕೊಂಡ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗವಕಾಶ ಪಡೆದು ಸಾಧನೆ ಮಾಡಿದ್ದಾರೆ’ ಎಂದು ಹೇಳಿದರು.</p>.<p>ವಿಶ್ವವಿದ್ಯಾಲಯ ಕುಲಾಧಿಪತಿ ಸಬಿತಾ ರಾಮಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಉಪಕುಲಪತಿ ಎಚ್.ಬಿ.ರಾಘವೇಂದ್ರ ವಾರ್ಷಿಕ ವರದಿ ಮಂಡಿಸಿದರು. ಸಿಎಂಆರ್ ಜ್ಞಾನಧಾರ ಟ್ರಸ್ಟ್ನ ಕಾರ್ಯದರ್ಶಿ ಕೆ.ಸಿ. ಜಗನ್ನಾಥ ರೆಡ್ಡಿ, ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಜಯದೀಪ್ ಕೆ.ಆರ್.ರೆಡ್ಡಿ, ಸಹ ಕುಲಪತಿ ಆರ್.ಪ್ರವೀಣ್, ಕುಲಸಚಿವ ಮೋಹನ್ ಬಾಬು, ಕುಲಸಚಿವ(ಮೌಲ್ಯಮಾಪನ) ಅಶ್ವಿನ್ ಕುಮಾರ್ ಉಪಸ್ಥಿತರಿದ್ದರು.</p>.<p>2024–25ನೇ ಸಾಲಿನಲ್ಲಿ ಶಿಕ್ಷಣ ಪೂರೈಸಿದ 2,350 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 33 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 37 ಪಿಎಚ್.ಡಿ ಸಾಧಕರಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>