<p><strong>ಬೆಂಗಳೂರು:</strong> ‘ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳು ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗಾಗಿ ಸರ್ಕಾರಕ್ಕೆ ಬಿಟ್ಟುಕೊಡದಿದ್ದರೆ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕ್ರಮ ಕೈಗೊಳ್ಳಬೇಕು’ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳ ಹಾಸಿಗೆ ಹಂಚಿಕೆ ಮತ್ತು ಲಭ್ಯತೆ ಕುರಿತು ಅವರು ಮಂಗಳವಾರ ವರ್ಚುವಲ್ ರೂಪದಲ್ಲಿ ಸಭೆ ನಡೆಸಿದರು.</p>.<p>‘ಬಿಬಿಎಂಪಿ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳ ನೇತೃತ್ವದ ತಂಡವು ಶೀಘ್ರವೇ ಎಲ್ಲ ಆಸ್ಪತ್ರೆಗಳಿಗೆ ಭೇಟಿ ನೀಡಿ ಹಾಸಿಗೆಗಳ ಲಭ್ಯತೆಯ ವಾಸ್ತವಾಂಶ ಪರಿಶೀಲಿಸಬೇಕು’ ಎಂದರು.</p>.<p>ಗೃಹ ಸಚಿವ ಬಸವರಾಜ ಬೊಮ್ಮಾಯಿ, ‘ಆಸ್ಪತ್ರೆಗಳ ಸಹಕಾರ ಪಡೆದು ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಹೆಚ್ಚಿಸಬೇಕು. ಅವುಗಳಲ್ಲಿ ಸದ್ಯ 960 ಹಾಸಿಗೆಗಳಿವೆ. ಈ ಸಾಮರ್ಥ್ಯವನ್ನು 5 ಸಾವಿರ ಹಾಸಿಗೆಗಳಿಗೆ ಹೆಚ್ಚಿಸಬೇಕು’ ಎಂದರು.</p>.<p>ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ‘ಎಲ್ಲ ಖಾಸಗಿ ಆಸ್ಪತ್ರೆಗಳು ಶೇ 50ರಷ್ಟು ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ 75ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದಡಿ ಚಿಕಿತ್ಸೆಗೆ ಮೀಸಲಿಡಬೇಕಿದೆ. ಇದರ ಉಸ್ತುವಾರಿಗೆ ವಲಯವಾರು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ 9 ತಂಡಗಳನ್ನು ರಚಿಸಲಾಗಿದೆ. 50 ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಆಪ್ತಮಿತ್ರ ಸಿಬ್ಬಂದಿಯನ್ನೂ ನೇಮಿಸಲಾಗಿದೆ’ ಎಂದರು.</p>.<p>ಬಿಬಿಎಂಪಿಯು ಮುಖ್ಯ ಆಯುಕ್ತ ಗೌರವ್ ಗುಪ್ತ, ‘ಕೆಲ ಖಾಸಗಿ ಆಸ್ಪತ್ರೆಗಳಿಗೆ ಈಗಾಗಲೇ ಭೇಟಿ ಪರಿಶೀಲನೆ ನಡೆಸಿದ್ದೇವೆ. ನಿಯಮಾನುಸಾರ ನಡೆದುಕೊಳ್ಳದ ಆಸ್ಪತ್ರೆಗಳಿಗೆ ನೋಟಿಸ್ ಜಾರಿಮಾಡಿದ್ದು, ಹಾಸಿಗೆಗಳನ್ನು ವಶಪಡಿಸಿಕೊಳ್ಳಲಾಗಿದೆ. ನೋಡಲ್ ಅಧಿಕಾರಿಗಳು ಆಸ್ಪತ್ರೆಗಳನ್ನು ಪರಿಶೀಲನೆ ನಡೆಸಲಿದ್ದು, ಆ ಬಳಿಕ ಇನ್ನಷ್ಟು ಹಾಸಿಗೆಗಳು ಲಭ್ಯವಾಗುವ ನಿರೀಕ್ಷೆ ಇದೆ’ ಎಂದರು.</p>.<p><strong>ಆಸ್ಪತ್ರೆಗಳಲ್ಲಿ ಸಹಾಯ ಕೇಂದ್ರ</strong><br />ನಗರದ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಡಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ರೋಗಿಗಳ ಆರೋಗ್ಯ ಸ್ಥಿತಿ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಲು ಸಹಾಯ ಕೇಂದ್ರ ಆರಂಭಿಸಲು ಬಿಬಿಎಂಪಿ ಕ್ರಮ ಕೈಗೊಂಡಿದೆ.</p>.<p>ಪ್ರತಿ ಆಸ್ಪತ್ರೆಗೂ ಜಲಮಂಡಳಿ ಹಾಗೂ ಬಿಬಿಎಂಪಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಆದೇಶ ಹೊರಡಿಸಿದ್ದಾರೆ. ಸಹಾಯಕೇಂದ್ರಗಳನ್ನು ಆರಂಭಿಸುವ ಹೊಣೆಯನ್ನು ಅವರಿಗೆ ವಹಿಸಲಾಗಿದೆ.</p>.<p>ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಸರ್ಕಾರಿ ಕೋಟಾಕ್ಕೆ ಹಂಚಿಕೆ ಆಗಿರುವ ಆಸ್ಪತ್ರೆಗಳಲ್ಲಿ ಬಿಬಿಎಂಪಿ ಸೂಚಿಸಿದ ರೋಗಿಗಳೇ ದಾಖಲಾಗುವುದನ್ನು ಖಚಿತಪಡಿಸಿಕೊಳ್ಳಬೇಕು. ಅವರಿಗೆ ಸರಿಯಾದ ಚಿಕಿತ್ಸೆ ದೊರಕುವಂತೆ ನೋಡಿಕೊಂಡು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದೂ ಮುಖ್ಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.</p>.<p><strong>‘ರೋಗಿ ಬಿಡುಗಡೆಯಾದ ತಕ್ಷಣವೇ ಮಾಹಿತಿ ನೀಡಿ’</strong><br />ಕೋವಿಡ್ ಚಿಕಿತ್ಸೆಗಾಗಿ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುವವರು ಗುಣಮುಖರಾಗಿ ಬಿಡುಗಡೆಯಾದ ಕೂಡಲೇ ಆ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್ಎಎಸ್ಟಿ) ಪೋರ್ಟಲ್ನಲ್ಲಿ ದಾಖಲಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಮಂಗಳವಾರ ಆದೇಶ ಮಾಡಿದ್ದಾರೆ.</p>.<p>ಸರ್ಕಾರಿ ಕೋಟಾದಡಿ ದಾಖಲಾದ ರೋಗಿಗಳು ಕಾಯಿಲೆ ವಾಸಿಯಾಗಿ ಮನೆಗೆ ಮರಳಿದ ಬಳಿಕವೂ, ಬಿಬಿಎಂಪಿ ವ್ಯಾಪ್ತಿಯ ಕೆಲವು ಖಾಸಗಿ ಆಸ್ಪತ್ರೆಗಳು ಈ ಕುರಿತ ನಿಖರ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಆಯಾ ಆಸ್ಪತ್ರೆಗಳ ನೋಡಲ್ ಅಧಿಕಾರಿಗಳು ಮತ್ತು ಆರೋಗ್ಯ ಮಿತ್ರ ಸಿಬ್ಬಂದಿ ಮೇಲ್ವಿಚಾರಣೆ ನೋಡಿಕೊಳ್ಳಬೇಕು ಎಂದು ಮುಖ್ಯ ಆಯುಕ್ತರು ಆದೇಶದಲ್ಲಿ ತಿಳಿಸಿರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳು ಶೇ 50ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗಾಗಿ ಸರ್ಕಾರಕ್ಕೆ ಬಿಟ್ಟುಕೊಡದಿದ್ದರೆ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕ್ರಮ ಕೈಗೊಳ್ಳಬೇಕು’ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳ ಹಾಸಿಗೆ ಹಂಚಿಕೆ ಮತ್ತು ಲಭ್ಯತೆ ಕುರಿತು ಅವರು ಮಂಗಳವಾರ ವರ್ಚುವಲ್ ರೂಪದಲ್ಲಿ ಸಭೆ ನಡೆಸಿದರು.</p>.<p>‘ಬಿಬಿಎಂಪಿ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳ ನೇತೃತ್ವದ ತಂಡವು ಶೀಘ್ರವೇ ಎಲ್ಲ ಆಸ್ಪತ್ರೆಗಳಿಗೆ ಭೇಟಿ ನೀಡಿ ಹಾಸಿಗೆಗಳ ಲಭ್ಯತೆಯ ವಾಸ್ತವಾಂಶ ಪರಿಶೀಲಿಸಬೇಕು’ ಎಂದರು.</p>.<p>ಗೃಹ ಸಚಿವ ಬಸವರಾಜ ಬೊಮ್ಮಾಯಿ, ‘ಆಸ್ಪತ್ರೆಗಳ ಸಹಕಾರ ಪಡೆದು ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಹೆಚ್ಚಿಸಬೇಕು. ಅವುಗಳಲ್ಲಿ ಸದ್ಯ 960 ಹಾಸಿಗೆಗಳಿವೆ. ಈ ಸಾಮರ್ಥ್ಯವನ್ನು 5 ಸಾವಿರ ಹಾಸಿಗೆಗಳಿಗೆ ಹೆಚ್ಚಿಸಬೇಕು’ ಎಂದರು.</p>.<p>ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ‘ಎಲ್ಲ ಖಾಸಗಿ ಆಸ್ಪತ್ರೆಗಳು ಶೇ 50ರಷ್ಟು ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳು ಶೇ 75ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದಡಿ ಚಿಕಿತ್ಸೆಗೆ ಮೀಸಲಿಡಬೇಕಿದೆ. ಇದರ ಉಸ್ತುವಾರಿಗೆ ವಲಯವಾರು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ 9 ತಂಡಗಳನ್ನು ರಚಿಸಲಾಗಿದೆ. 50 ಆಸ್ಪತ್ರೆಗಳಿಗೆ ನೋಡಲ್ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಆಪ್ತಮಿತ್ರ ಸಿಬ್ಬಂದಿಯನ್ನೂ ನೇಮಿಸಲಾಗಿದೆ’ ಎಂದರು.</p>.<p>ಬಿಬಿಎಂಪಿಯು ಮುಖ್ಯ ಆಯುಕ್ತ ಗೌರವ್ ಗುಪ್ತ, ‘ಕೆಲ ಖಾಸಗಿ ಆಸ್ಪತ್ರೆಗಳಿಗೆ ಈಗಾಗಲೇ ಭೇಟಿ ಪರಿಶೀಲನೆ ನಡೆಸಿದ್ದೇವೆ. ನಿಯಮಾನುಸಾರ ನಡೆದುಕೊಳ್ಳದ ಆಸ್ಪತ್ರೆಗಳಿಗೆ ನೋಟಿಸ್ ಜಾರಿಮಾಡಿದ್ದು, ಹಾಸಿಗೆಗಳನ್ನು ವಶಪಡಿಸಿಕೊಳ್ಳಲಾಗಿದೆ. ನೋಡಲ್ ಅಧಿಕಾರಿಗಳು ಆಸ್ಪತ್ರೆಗಳನ್ನು ಪರಿಶೀಲನೆ ನಡೆಸಲಿದ್ದು, ಆ ಬಳಿಕ ಇನ್ನಷ್ಟು ಹಾಸಿಗೆಗಳು ಲಭ್ಯವಾಗುವ ನಿರೀಕ್ಷೆ ಇದೆ’ ಎಂದರು.</p>.<p><strong>ಆಸ್ಪತ್ರೆಗಳಲ್ಲಿ ಸಹಾಯ ಕೇಂದ್ರ</strong><br />ನಗರದ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದಡಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ರೋಗಿಗಳ ಆರೋಗ್ಯ ಸ್ಥಿತಿ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಲು ಸಹಾಯ ಕೇಂದ್ರ ಆರಂಭಿಸಲು ಬಿಬಿಎಂಪಿ ಕ್ರಮ ಕೈಗೊಂಡಿದೆ.</p>.<p>ಪ್ರತಿ ಆಸ್ಪತ್ರೆಗೂ ಜಲಮಂಡಳಿ ಹಾಗೂ ಬಿಬಿಎಂಪಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಆದೇಶ ಹೊರಡಿಸಿದ್ದಾರೆ. ಸಹಾಯಕೇಂದ್ರಗಳನ್ನು ಆರಂಭಿಸುವ ಹೊಣೆಯನ್ನು ಅವರಿಗೆ ವಹಿಸಲಾಗಿದೆ.</p>.<p>ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಸರ್ಕಾರಿ ಕೋಟಾಕ್ಕೆ ಹಂಚಿಕೆ ಆಗಿರುವ ಆಸ್ಪತ್ರೆಗಳಲ್ಲಿ ಬಿಬಿಎಂಪಿ ಸೂಚಿಸಿದ ರೋಗಿಗಳೇ ದಾಖಲಾಗುವುದನ್ನು ಖಚಿತಪಡಿಸಿಕೊಳ್ಳಬೇಕು. ಅವರಿಗೆ ಸರಿಯಾದ ಚಿಕಿತ್ಸೆ ದೊರಕುವಂತೆ ನೋಡಿಕೊಂಡು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದೂ ಮುಖ್ಯ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.</p>.<p><strong>‘ರೋಗಿ ಬಿಡುಗಡೆಯಾದ ತಕ್ಷಣವೇ ಮಾಹಿತಿ ನೀಡಿ’</strong><br />ಕೋವಿಡ್ ಚಿಕಿತ್ಸೆಗಾಗಿ ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುವವರು ಗುಣಮುಖರಾಗಿ ಬಿಡುಗಡೆಯಾದ ಕೂಡಲೇ ಆ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (ಎಸ್ಎಎಸ್ಟಿ) ಪೋರ್ಟಲ್ನಲ್ಲಿ ದಾಖಲಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಮಂಗಳವಾರ ಆದೇಶ ಮಾಡಿದ್ದಾರೆ.</p>.<p>ಸರ್ಕಾರಿ ಕೋಟಾದಡಿ ದಾಖಲಾದ ರೋಗಿಗಳು ಕಾಯಿಲೆ ವಾಸಿಯಾಗಿ ಮನೆಗೆ ಮರಳಿದ ಬಳಿಕವೂ, ಬಿಬಿಎಂಪಿ ವ್ಯಾಪ್ತಿಯ ಕೆಲವು ಖಾಸಗಿ ಆಸ್ಪತ್ರೆಗಳು ಈ ಕುರಿತ ನಿಖರ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಆಯಾ ಆಸ್ಪತ್ರೆಗಳ ನೋಡಲ್ ಅಧಿಕಾರಿಗಳು ಮತ್ತು ಆರೋಗ್ಯ ಮಿತ್ರ ಸಿಬ್ಬಂದಿ ಮೇಲ್ವಿಚಾರಣೆ ನೋಡಿಕೊಳ್ಳಬೇಕು ಎಂದು ಮುಖ್ಯ ಆಯುಕ್ತರು ಆದೇಶದಲ್ಲಿ ತಿಳಿಸಿರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>