<p><strong>ಬೆಂಗಳೂರು:</strong> ಆಟೋ ಚಾಲನಾ ತರಬೇತಿ ಪಡೆದಿದ್ದ 20 ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉಚಿತ ಎಲೆಕ್ಟ್ರಿಕ್ ಆಟೋ ವಿತರಣೆ ಮಾಡಿದ್ದಾರೆ.</p><p>ಬಿ.ಪ್ಯಾಕ್ ಹಾಗೂ ಸಿಜಿಐ ಸಹಯೋಗದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಭಾಗವಹಿಸಿದ್ದರು. </p><p>ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಸರ್ಕಾರದಿಂದಲೇ ಸಬ್ಸಿಡಿಯುಕ್ತ ಎಲೆಕ್ಟ್ರಿಕ್ ಆಟೋ ಪಡೆದುಕೊಳ್ಳಲು ಬೇಕಾದ ಸಹಾಯ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ಹೇಳಿದರು. </p><p>ಬಿ.ಪ್ಯಾಕ್ ಹಾಗೂ ಸಿಜಿಐ ಸಹಯೋಗದಲ್ಲಿ ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತವಾಗಿ ಆಟೋ ಚಾಲನೆ ತರಬೇತಿ ನೀಡುವ ಜೊತೆಗೆ, ಅವರಿಗೆ ಆರ್ಥಿಕವಾಗಿ ಇನ್ನಷ್ಟು ಅನುಕೂಲ ಮಾಡಿಕೊಡಲು ಉಚಿತವಾಗಿಯೇ ಆಟೋ ವಿತರಿಸುತ್ತಿರುವುದು ಶ್ಲಾಘನೀಯ. ಇದರಿಂದ ಸಾಕಷ್ಟು ಮಹಿಳೆಯರು ತಮ್ಮ ಕಾಲಮೇಲೆ ನಿಂತು ಜೀವನ ನಡೆಸುವ ಧೈರ್ಯ ಬೆಳೆಸಿಕೊಳ್ಳುತ್ತಾರೆ ಎಂದರು. </p><p>ಸರ್ಕಾರದಿಂದಲೂ ಮಹಿಳೆಯರಿಗೆ ಇ.ವಿ.ಆಟೋ ಖರೀದಿ ವೇಳೆ ಸಬ್ಸಿಡಿ ಒದಗಿಸುವುದು ಹಾಗೂ ಡ್ರೈವಿಂಗ್ ಲೈಸನ್ಸ್ ಮಾಡಿಸುವ ವೇಳೆ ಅವರಿಗೆ ಮೊದಲ ಆದ್ಯತೆ ನೀಡುವಂತೆಯೂ ಸೂಚನೆ ನೀಡುತ್ತೇನೆ. ನನ್ನ ಸಂಸ್ಥೆಯಿಂದಲೇ 10 ಎಲೆಕ್ಟ್ರಿಕ್ ಆಟೋಗಳನ್ನು ಈ ಸಮುದಾಯಕ್ಕೆ ಉಚಿತವಾಗಿ ನೀಡುತ್ತೇನೆ ಎಂದರು.</p><p>ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಸಾಕ್ಷರತೆ ಪ್ರಮಾಣ ಹೆಚ್ಚುತ್ತಿದ್ದು, ಎಲ್ಲಾ ಕ್ಷೇತ್ರದಲ್ಲೂ ಉದ್ಯೋಗದಲ್ಲಿದ್ದಾರೆ. ಆಟೋ ಚಾಲನೆ ಕ್ಷೇತ್ರದಲ್ಲಿ ಮಹಿಳೆಯರ ಪ್ರಮಾಣ ಕಡಿಮೆ. ಆದರೆ, ಕಳೆದ ಕೆಲವು ವರ್ಷಗಳಿಂದ ಈ ಕ್ಷೇತ್ರದಲ್ಲೂ ಹೆಚ್ಚು ಮಹಿಳೆಯರು ಆಸಕ್ತಿ ತೋರುತ್ತಿರುವುದು ಶ್ಲಾಘನೀಯ. ರಾಜಕೀಯ ಕ್ಷೇತ್ರದಲ್ಲಿಯೇ ಮಹಿಳಾ ಭಾಗವಹಿಸುವಿಕೆ ಕಡಿಮೆ ಎಂದರು. </p><p>ಬಿ.ಪ್ಯಾಕ್ ಸಿಇಒ ರೇವತಿ ಅಶೋಕ್ ಮಾತನಾಡಿ, ಸಮಾಜದಲ್ಲಿ ಮಹಿಳೆಯರಿಗೆ ಅರ್ಥಪೂರ್ಣ ಅವಕಾಶ ಒದಗಿಸುವ ಸಲುವಾಗಿ ಉಚಿತ ಆಟೋ ಚಾಲನಾ ತರಬೇತಿ ನೀಡುತ್ತಾ ಬರಲಾಗಿದ್ದು, ಆಯ್ದ ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತ ಎಲೆಕ್ಟ್ರಿಕ್ ಆಟೋ ನೀಡಲಾಗಿದೆ. ಈ ರೀತಿಯ ಕಾರ್ಯಕ್ರಮಗಳು ಎಲ್ಲಾ ಕಾರ್ಪೋರೇಟ್ ವಲಯ ಹಾಗೂ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯುತ್ತಿರಬೇಕು ಎಂದು ಹೇಳಿದರು. </p><p>ಈಗಾಗಲೇ ಬಿ.ಪ್ಯಾಕ್ ವತಿಯಿಂದ 400ಕ್ಕೂ ಹೆಚ್ಚು ಮಹಿಳೆಯರಿಗೆ ತರಬೇತಿ ನೀಡಿದ್ದು, ಈ ವರ್ಷದೊಳಗೆ ಸುಮಾರು ಸಾವಿರ ಮಹಿಳೆಯರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. </p><p>ಸಿಜಿಐನ ಹಿರಿಯ ಉಪಾಧ್ಯಕ್ಷ ಸುಧೀರ್ ಶರ್ಮಾ ಮಾತನಾಡಿ, ಬೆಂಗಳೂರಿನ ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಜೀವನೋಪಾಯ ಕಂಡುಕೊಳ್ಳಲು ಹಾಗೂ ವೃತ್ತಿ ಜೀವನ ಉತ್ತೇಜಿಸಲು ಈ ತರಬೇತಿ ನೀಡುತ್ತಾ ಬಂದಿರುವುದು ಹೆಮ್ಮೆಯ ವಿಷಯ ಎಂದರು. </p><p>ಕಾರ್ಯಕ್ರಮದಲ್ಲಿ ಬಯೋಕಾನ್ ಮುಖ್ಯಸ್ಥೆ ಮಜುಂದಾರ್ ಷಾ, ಸಿಜಿಐನ ಹಿರಿಯ ಉಪಾಧ್ಯಕ್ಷೆ ಜೆನ್ನಿಫರ್ ಮೆಚೇರಿಪಡ್ಡಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆಟೋ ಚಾಲನಾ ತರಬೇತಿ ಪಡೆದಿದ್ದ 20 ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉಚಿತ ಎಲೆಕ್ಟ್ರಿಕ್ ಆಟೋ ವಿತರಣೆ ಮಾಡಿದ್ದಾರೆ.</p><p>ಬಿ.ಪ್ಯಾಕ್ ಹಾಗೂ ಸಿಜಿಐ ಸಹಯೋಗದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಭಾಗವಹಿಸಿದ್ದರು. </p><p>ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಸರ್ಕಾರದಿಂದಲೇ ಸಬ್ಸಿಡಿಯುಕ್ತ ಎಲೆಕ್ಟ್ರಿಕ್ ಆಟೋ ಪಡೆದುಕೊಳ್ಳಲು ಬೇಕಾದ ಸಹಾಯ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ಹೇಳಿದರು. </p><p>ಬಿ.ಪ್ಯಾಕ್ ಹಾಗೂ ಸಿಜಿಐ ಸಹಯೋಗದಲ್ಲಿ ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತವಾಗಿ ಆಟೋ ಚಾಲನೆ ತರಬೇತಿ ನೀಡುವ ಜೊತೆಗೆ, ಅವರಿಗೆ ಆರ್ಥಿಕವಾಗಿ ಇನ್ನಷ್ಟು ಅನುಕೂಲ ಮಾಡಿಕೊಡಲು ಉಚಿತವಾಗಿಯೇ ಆಟೋ ವಿತರಿಸುತ್ತಿರುವುದು ಶ್ಲಾಘನೀಯ. ಇದರಿಂದ ಸಾಕಷ್ಟು ಮಹಿಳೆಯರು ತಮ್ಮ ಕಾಲಮೇಲೆ ನಿಂತು ಜೀವನ ನಡೆಸುವ ಧೈರ್ಯ ಬೆಳೆಸಿಕೊಳ್ಳುತ್ತಾರೆ ಎಂದರು. </p><p>ಸರ್ಕಾರದಿಂದಲೂ ಮಹಿಳೆಯರಿಗೆ ಇ.ವಿ.ಆಟೋ ಖರೀದಿ ವೇಳೆ ಸಬ್ಸಿಡಿ ಒದಗಿಸುವುದು ಹಾಗೂ ಡ್ರೈವಿಂಗ್ ಲೈಸನ್ಸ್ ಮಾಡಿಸುವ ವೇಳೆ ಅವರಿಗೆ ಮೊದಲ ಆದ್ಯತೆ ನೀಡುವಂತೆಯೂ ಸೂಚನೆ ನೀಡುತ್ತೇನೆ. ನನ್ನ ಸಂಸ್ಥೆಯಿಂದಲೇ 10 ಎಲೆಕ್ಟ್ರಿಕ್ ಆಟೋಗಳನ್ನು ಈ ಸಮುದಾಯಕ್ಕೆ ಉಚಿತವಾಗಿ ನೀಡುತ್ತೇನೆ ಎಂದರು.</p><p>ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಸಾಕ್ಷರತೆ ಪ್ರಮಾಣ ಹೆಚ್ಚುತ್ತಿದ್ದು, ಎಲ್ಲಾ ಕ್ಷೇತ್ರದಲ್ಲೂ ಉದ್ಯೋಗದಲ್ಲಿದ್ದಾರೆ. ಆಟೋ ಚಾಲನೆ ಕ್ಷೇತ್ರದಲ್ಲಿ ಮಹಿಳೆಯರ ಪ್ರಮಾಣ ಕಡಿಮೆ. ಆದರೆ, ಕಳೆದ ಕೆಲವು ವರ್ಷಗಳಿಂದ ಈ ಕ್ಷೇತ್ರದಲ್ಲೂ ಹೆಚ್ಚು ಮಹಿಳೆಯರು ಆಸಕ್ತಿ ತೋರುತ್ತಿರುವುದು ಶ್ಲಾಘನೀಯ. ರಾಜಕೀಯ ಕ್ಷೇತ್ರದಲ್ಲಿಯೇ ಮಹಿಳಾ ಭಾಗವಹಿಸುವಿಕೆ ಕಡಿಮೆ ಎಂದರು. </p><p>ಬಿ.ಪ್ಯಾಕ್ ಸಿಇಒ ರೇವತಿ ಅಶೋಕ್ ಮಾತನಾಡಿ, ಸಮಾಜದಲ್ಲಿ ಮಹಿಳೆಯರಿಗೆ ಅರ್ಥಪೂರ್ಣ ಅವಕಾಶ ಒದಗಿಸುವ ಸಲುವಾಗಿ ಉಚಿತ ಆಟೋ ಚಾಲನಾ ತರಬೇತಿ ನೀಡುತ್ತಾ ಬರಲಾಗಿದ್ದು, ಆಯ್ದ ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತ ಎಲೆಕ್ಟ್ರಿಕ್ ಆಟೋ ನೀಡಲಾಗಿದೆ. ಈ ರೀತಿಯ ಕಾರ್ಯಕ್ರಮಗಳು ಎಲ್ಲಾ ಕಾರ್ಪೋರೇಟ್ ವಲಯ ಹಾಗೂ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯುತ್ತಿರಬೇಕು ಎಂದು ಹೇಳಿದರು. </p><p>ಈಗಾಗಲೇ ಬಿ.ಪ್ಯಾಕ್ ವತಿಯಿಂದ 400ಕ್ಕೂ ಹೆಚ್ಚು ಮಹಿಳೆಯರಿಗೆ ತರಬೇತಿ ನೀಡಿದ್ದು, ಈ ವರ್ಷದೊಳಗೆ ಸುಮಾರು ಸಾವಿರ ಮಹಿಳೆಯರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. </p><p>ಸಿಜಿಐನ ಹಿರಿಯ ಉಪಾಧ್ಯಕ್ಷ ಸುಧೀರ್ ಶರ್ಮಾ ಮಾತನಾಡಿ, ಬೆಂಗಳೂರಿನ ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಜೀವನೋಪಾಯ ಕಂಡುಕೊಳ್ಳಲು ಹಾಗೂ ವೃತ್ತಿ ಜೀವನ ಉತ್ತೇಜಿಸಲು ಈ ತರಬೇತಿ ನೀಡುತ್ತಾ ಬಂದಿರುವುದು ಹೆಮ್ಮೆಯ ವಿಷಯ ಎಂದರು. </p><p>ಕಾರ್ಯಕ್ರಮದಲ್ಲಿ ಬಯೋಕಾನ್ ಮುಖ್ಯಸ್ಥೆ ಮಜುಂದಾರ್ ಷಾ, ಸಿಜಿಐನ ಹಿರಿಯ ಉಪಾಧ್ಯಕ್ಷೆ ಜೆನ್ನಿಫರ್ ಮೆಚೇರಿಪಡ್ಡಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>