<p><strong>ಬೆಂಗಳೂರು: ‘</strong>ಸ್ನೇಹದೀಪ ಅಂಗವಿಕಲರ ಸಂಸ್ಥೆ’ಯ ವತಿಯಿಂದ ರಾಜ್ಯಮಟ್ಟದ ಪ್ರತಿಭಾನ್ವೇಷಣೆ–2026 ಕಾರ್ಯಕ್ರಮವು ಮಲ್ಲೇಶ್ವರದ 19ನೇ ಅಡ್ಡರಸ್ತೆಯ ರಜತಭವನದಲ್ಲಿ ಈಚೆಗೆ ನಡೆಯಿತು. </p>.<p>ಪ್ರತಿಭಾನ್ವೇಷಣೆಯಲ್ಲಿ 550ಕ್ಕೂ ಹೆಚ್ಚು ಅಂಧ ವಿದ್ಯಾರ್ಥಿಗಳು ಭಾಗವಹಿಸಿದ್ದರು. ತಮ್ಮ ವಿಶೇಷ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆ ಗಾಯನ, ನೃತ್ಯ, ವಾದ್ಯ, ಮಿಮಿಕ್ರಿ, ಏಕಪಾತ್ರಾಭಿನಯ... ಹೀಗೆ ಹಲವು ಸ್ಪರ್ಧೆಗಳು ಜರುಗಿದವು.</p>.<p>ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ , ಟ್ರೋಫಿ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು. ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಉಚಿತವಾಗಿ ಕಾಲೇಜು ಬ್ಯಾಗ್ ಮತ್ತು ನಡೆಯಲು ಅಂಧರು ಬಳಸುವ ಕೇನ್(ವಾಕಿಂಗ್ ಸ್ಟಿಕ್) ವಿತರಿಸಲಾಯಿತು.</p>.<p>ಪ್ರತಿಭಾನ್ವೇಷಣೆಯಲ್ಲಿ ರಾಣೇಬೆನ್ನೂರಿನ ಸ್ನೇಹದೀಪ ಸಂಸ್ಥೆ ಪ್ರಥಮ ಹಾಗೂ ಬೆಂಗಳೂರಿನ ‘ಬೆಳಕು’ ಅಕಾಡೆಮಿ ದ್ವಿತೀಯ ಸ್ಥಾನ ಪಡೆಯಿತು.</p>.<p>ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಖಾಸಗಿ ಕ್ಷೇತ್ರದ ಉದ್ಯೋಗದಲ್ಲಿ ಅಂಗವಿಕಲರಿಗೆ ಶೇ 5ರಷ್ಟು ಮೀಸಲಾತಿ ನೀಡಲಾಗುವುದು ಎಂದು ತಿಳಿಸಿದರು.</p>.<p>ಸ್ನೇಹದೀಪ ಸಂಸ್ಥೆಗೆ ಸಂತೋಷ್ ಲಾಡ್ ಪ್ರತಿಷ್ಠಾನದಿಂದ ಕಟ್ಟಡ ನಿರ್ಮಾಣಕ್ಕೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಸ್ನೇಹದೀಪ ಅಂಗವಿಕಲರ ಸಂಸ್ಥೆಯ ಧರ್ಮದರ್ಶಿ ಪಾಲ್ ಮುದ್ದಾ, ಕೆ.ಜಿ.ಮೋಹನ್, ಹಿನ್ನೆಲೆ ಗಾಯಕಿ ಪ್ರಿಯದರ್ಶಿನಿ, ನೀಲಾ ಕಿಶೋರ್, ನಟಿ ರಾಗಿಣಿ ದ್ವಿವೇದಿ, ಮೈಸೂರು ರಮಾನಂದ್ ಮೊದಲಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಸ್ನೇಹದೀಪ ಅಂಗವಿಕಲರ ಸಂಸ್ಥೆ’ಯ ವತಿಯಿಂದ ರಾಜ್ಯಮಟ್ಟದ ಪ್ರತಿಭಾನ್ವೇಷಣೆ–2026 ಕಾರ್ಯಕ್ರಮವು ಮಲ್ಲೇಶ್ವರದ 19ನೇ ಅಡ್ಡರಸ್ತೆಯ ರಜತಭವನದಲ್ಲಿ ಈಚೆಗೆ ನಡೆಯಿತು. </p>.<p>ಪ್ರತಿಭಾನ್ವೇಷಣೆಯಲ್ಲಿ 550ಕ್ಕೂ ಹೆಚ್ಚು ಅಂಧ ವಿದ್ಯಾರ್ಥಿಗಳು ಭಾಗವಹಿಸಿದ್ದರು. ತಮ್ಮ ವಿಶೇಷ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆ ಗಾಯನ, ನೃತ್ಯ, ವಾದ್ಯ, ಮಿಮಿಕ್ರಿ, ಏಕಪಾತ್ರಾಭಿನಯ... ಹೀಗೆ ಹಲವು ಸ್ಪರ್ಧೆಗಳು ಜರುಗಿದವು.</p>.<p>ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ , ಟ್ರೋಫಿ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು. ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಉಚಿತವಾಗಿ ಕಾಲೇಜು ಬ್ಯಾಗ್ ಮತ್ತು ನಡೆಯಲು ಅಂಧರು ಬಳಸುವ ಕೇನ್(ವಾಕಿಂಗ್ ಸ್ಟಿಕ್) ವಿತರಿಸಲಾಯಿತು.</p>.<p>ಪ್ರತಿಭಾನ್ವೇಷಣೆಯಲ್ಲಿ ರಾಣೇಬೆನ್ನೂರಿನ ಸ್ನೇಹದೀಪ ಸಂಸ್ಥೆ ಪ್ರಥಮ ಹಾಗೂ ಬೆಂಗಳೂರಿನ ‘ಬೆಳಕು’ ಅಕಾಡೆಮಿ ದ್ವಿತೀಯ ಸ್ಥಾನ ಪಡೆಯಿತು.</p>.<p>ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, ಖಾಸಗಿ ಕ್ಷೇತ್ರದ ಉದ್ಯೋಗದಲ್ಲಿ ಅಂಗವಿಕಲರಿಗೆ ಶೇ 5ರಷ್ಟು ಮೀಸಲಾತಿ ನೀಡಲಾಗುವುದು ಎಂದು ತಿಳಿಸಿದರು.</p>.<p>ಸ್ನೇಹದೀಪ ಸಂಸ್ಥೆಗೆ ಸಂತೋಷ್ ಲಾಡ್ ಪ್ರತಿಷ್ಠಾನದಿಂದ ಕಟ್ಟಡ ನಿರ್ಮಾಣಕ್ಕೆ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಸ್ನೇಹದೀಪ ಅಂಗವಿಕಲರ ಸಂಸ್ಥೆಯ ಧರ್ಮದರ್ಶಿ ಪಾಲ್ ಮುದ್ದಾ, ಕೆ.ಜಿ.ಮೋಹನ್, ಹಿನ್ನೆಲೆ ಗಾಯಕಿ ಪ್ರಿಯದರ್ಶಿನಿ, ನೀಲಾ ಕಿಶೋರ್, ನಟಿ ರಾಗಿಣಿ ದ್ವಿವೇದಿ, ಮೈಸೂರು ರಮಾನಂದ್ ಮೊದಲಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>