‘ಒಕ್ಕಲಿಗ ಸಮುದಾಯದ ಮುಖಂಡರು ನನ್ನನ್ನು ಭೇಟಿಯಾಗಿ ಕಾಂತರಾಜ ವರದಿ ಸ್ವೀಕರಿಸದಂತೆ ಮನವಿ ಮಾಡಿದರು. ಅದಕ್ಕೆ, ನಾನು ವರದಿಯಲ್ಲಿ ಏನಿದೆ ಎಂಬುದು ಗೊತ್ತಿದೆಯೇ ಎಂದು ಕೇಳಿದೆ. ಅವರು ಇಲ್ಲವೆಂದರು. ವರದಿ ಸ್ವೀಕರಿಸಿದ ಬಳಿಕ ಅದರಲ್ಲಿ ಏನಿದೆ ಎಂಬುದು ತಿಳಿಯಲಿದೆ. ಆದರೆ, ಈ ಹಂತದಲ್ಲಿ ವಿರೋಧ ಮಾಡುವ ಅಗತ್ಯವಿಲ್ಲ. ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮನವರಿಕೆ ಮಾಡಿದ್ದೇನೆ’ ಎಂದರು.