ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಮತ್ತು ಕಂದಾಯ ಸಚಿವ ಆರ್.ಅಶೋಕ ಅವರ ನಡುವಿನ ಮುಸುಕಿನ ಗುದ್ದಾಟ ಮತ್ತೊಮ್ಮೆ ಬಹಿರಂಗಗೊಂಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಅಶೋಕ ಅವರ ಹೆಸರು ಉಲ್ಲೇಖಿಸದೇ ಸೋಮಣ್ಣ ಆಡಿರುವ ಮಾತು ಚರ್ಚೆಗೆ ಗ್ರಾಸವಾಗಿದೆ.
‘ಬೆಂಗಳೂರು ನಗರದ ಅಭಿವೃದ್ಧಿಗೆ ವಿಚಾರದಲ್ಲಿ ನನ್ನ ಮಾತಿಗೆ ಕಿಮ್ಮತ್ತು ಇಲ್ಲ. ಒಬ್ಬರ ಮಾತು ಮಾತ್ರ ನಡೆಯುತ್ತಿದೆ’ ಎಂದು ಸೋಮಣ್ಣ ಅವರು ಭಾವುಕರಾಗಿ ಹೇಳಿದ್ದಾಗಿ ಮೂಲಗಳು ತಿಳಿಸಿವೆ.
‘ಹೀಗೆ ನಿರ್ಲಕ್ಷಿಸಿದರೆ ನಾವು ಕೆಲಸ ಮಾಡುವುದು ಹೇಗೆ? ಹಿರಿಯನಾಗಿ ನನಗೆ ಬೆಲೆ ಕೊಡದಿದ್ದರೆ ಬೇರೆ ಮಾರ್ಗ ವಿಲ್ಲ’ ಎಂದು ಬೇಸರ ಹೊರಹಾಕಿದರು. ಆ ವೇಳೆಯಲ್ಲಿ ಕೆಲ ಸಚಿವರು ಸೋಮಣ್ಣ ಅವರನ್ನು ಸಮಾಧಾನಪಡಿಸಿದರು ಎಂದು ಮೂಲಗಳು ಹೇಳಿವೆ.