ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌.ಅಶೋಕ ಅವರ ಜೊತೆಗಿನ ಮುಸುಕಿನ ಗುದ್ದಾಟ: ಸಂಪುಟ ಸಭೆಯಲ್ಲಿ ಸೋಮಣ್ಣ ಭಾವುಕ

Last Updated 25 ಆಗಸ್ಟ್ 2022, 20:57 IST
ಅಕ್ಷರ ಗಾತ್ರ

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಮತ್ತು ಕಂದಾಯ ಸಚಿವ ಆರ್‌.ಅಶೋಕ ಅವರ ನಡುವಿನ ಮುಸುಕಿನ ಗುದ್ದಾಟ ಮತ್ತೊಮ್ಮೆ ಬಹಿರಂಗಗೊಂಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಅಶೋಕ ಅವರ ಹೆಸರು ಉಲ್ಲೇಖಿಸದೇ ಸೋಮಣ್ಣ ಆಡಿರುವ ಮಾತು ಚರ್ಚೆಗೆ ಗ್ರಾಸವಾಗಿದೆ.

‘ಬೆಂಗಳೂರು ನಗರದ ಅಭಿವೃದ್ಧಿಗೆ ವಿಚಾರದಲ್ಲಿ ನನ್ನ ಮಾತಿಗೆ ಕಿಮ್ಮತ್ತು ಇಲ್ಲ. ಒಬ್ಬರ ಮಾತು ಮಾತ್ರ ನಡೆಯುತ್ತಿದೆ’ ಎಂದು ಸೋಮಣ್ಣ ಅವರು ಭಾವುಕರಾಗಿ ಹೇಳಿದ್ದಾಗಿ ಮೂಲಗಳು ತಿಳಿಸಿವೆ.

‘ಹೀಗೆ ನಿರ್ಲಕ್ಷಿಸಿದರೆ ನಾವು ಕೆಲಸ
ಮಾಡುವುದು ಹೇಗೆ? ಹಿರಿಯನಾಗಿ ನನಗೆ ಬೆಲೆ ಕೊಡದಿದ್ದರೆ ಬೇರೆ ಮಾರ್ಗ
ವಿಲ್ಲ’ ಎಂದು ಬೇಸರ ಹೊರಹಾಕಿದರು. ಆ ವೇಳೆಯಲ್ಲಿ ಕೆಲ ಸಚಿವರು ಸೋಮಣ್ಣ ಅವರನ್ನು ಸಮಾಧಾನಪಡಿಸಿದರು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT