‘ಮೇ ತಿಂಗಳಲ್ಲಿ ಸುರಿದ ಮಳೆಯಿಂದ ಆರ್.ಆರ್. ನಗರ ವಲಯ ವ್ಯಾಪ್ತಿಯಲ್ಲಿ ಎಷ್ಟು ಮನೆಗಳಿಗೆ ಹಾನಿಯಾಗಿದೆ, ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಎಷ್ಟು ಮಂದಿಗೆ ನೀಡಲಾಗಿದೆ’ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 406, ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ 122 ಮನೆಗಳಿಗೆ ಹಾನಿಯಾಗಿದೆ. ಸಂತ್ರಸ್ತರ ಬ್ಯಾಂಕ್ ಖಾತೆಗೆ ₹1.32 ಕೋಟಿ ಜಮೆ ಮಾಡಲಾಗಿದೆ ಎಂದು ಉತ್ತರಿಸಿದರು.