ಬೆಂಗಳೂರು: ‘ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆಗಳು, ಆಮ್ಲಜನಕ ಸಾಂದ್ರಕಗಳು, ವೈದ್ಯಕೀಯ ಕಿಟ್ ಸೇರಿದಂತೆ ಮೂಲ ಸೌಕರ್ಯಗಳನ್ನು ಶಾಶ್ವತವಾಗಿ ಒದಗಿಸುವ ಕುರಿತು ಸರ್ಕಾರದೊಂದಿಗೆ ಚರ್ಚಿಸಲಾಗುವುದು’ ಎಂದುಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.