ಪರಿಶಿಷ್ಟ ಜಾತಿ ವರ್ಗದ ಉದ್ಯಮಿಗಳ ಜತೆ ಕೈಗಾರಿಕಾ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಸಮುದಾಯದವರು ಕೇಳಿದ ಎಲ್ಲವನ್ನೂ ರಾಜ್ಯ ಸರ್ಕಾರ ನೀಡಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಹಾಸ್ಟೆಲ್ ಸೌಲಭ್ಯ ಒದಗಿಸಲಾಗಿದೆ. ₹ 50 ಲಕ್ಷದವರೆಗಿನ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಲಾಗಿದ್ದು, ಆ ಮೊತ್ತವನ್ನು ₹ 1 ಕೋಟಿಗೆ ಏರಿಸಲು ಉದ್ದೇಶಿಸಲಾಗಿದೆ’ ಎಂದರು.