ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಮತ್ತು ಪಕ್ಷದವರು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂಬ ಭರವಸೆ ಇದೆ. ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ಸಿಗುವುದಿಲ್ಲ ಎಂಬ ನಿರ್ಧಾರಕ್ಕೆ ಈಗಲೇ ಬರಬೇಕೆ?, ಕಾದು ನೋಡೋಣ’ ಎಂದು ಹೇಳಿದರು.